Thursday, December 4, 2025
ಶ್ರೀಕೃಷ್ಣ ಅಂದರೆ ಯಾರು?
Monday, December 1, 2025
ತಳೋದರಿಯ ಮಾತುಳನ ಮಾವನ...
ವೇದಪುರುಷನ ಸುತನಸುತನ ಸಹೋದರನ ಮೊಮ್ಮಗನ ಮಗನ ತಳೋದರಿಯ ಮಾತುಳನ ರೂಪನನತುಳ ಭುಜಬಲದಿಕಾದಿ ಗೆಲಿದನ ಅಣ್ಣ ನವ್ವೆಯನಾದಿನಿಯ ಜಠರದಲಿ ಜನಿಸಿದನಾದಿ ಮೂರತಿ ಸಲಹೊ ಗದುಗಿನ ವೀರನಾರಯಣ
ಮೇಲೆ ಕೊಟ್ಟಿರುವ ಚಿತ್ರವನ್ನು ನೋಡಿಕೊಂಡು ಈ ಪದ್ಯವನ್ನು ಓದಿಕೊಂಡರೆ ಒಗಟನ್ನು ಸುಲಭವಾಗಿ ಬಿಡಿಸಿಕೊಳ್ಳಬಹುದು.
- ವೇದಪುರುಷನ - ಶ್ರೀಮನ್ನಾರಾಯಣನ
- ಸುತನ (ಮಗ) - ಚತುರ್ಮುಖ ಬ್ರಹ್ಮನ
- ಸುತನ (ಮಗ) - ನಾರದನ
- ಸಹೋದರನ - ಮರೀಚಿಯ
- ಮೊಮ್ಮಗನ - ಮಗ ಕಶ್ಯಪನ ಮಗನಾದ ಇಂದ್ರನ
- ಮಗನ - ಅರ್ಜುನನ
- ತಳೋದರಿಯ - ಹೆಂಡತಿಯಾದ ಸುಭದ್ರೆಯ
- ಮಾತುಳನ - ಸೋದರಮಾವನಾದ ಕಂಸನ
- ಮಾವನ - ಕಂಸನಿಗೆ ಹೆಣ್ಣುಕೊಟ್ಟ ಮಾವ ಜರಾಸಂಧನನ್ನು
- ಅತುಲ ಭುಜಬಲದಿ ಕಾದು ಗೆಲಿದನ - ಭೀಮಸೇನನ
- ಅಣ್ಣನ - ಧರ್ಮರಾಯನ
- ಅವ್ವೆಯ - ತಾಯಿ ಕುಂತಿಯ
- ನಾದಿನಿಯ - ದೇವಕಿಯ
- ಜಠರದಲಿ ಜನಿಸಿದ ಅನಾದಿ ಮೂರುತಿ - ಶ್ರೀಕೃಷ್ಣ
ಈ ಪದ್ಯದಲ್ಲಿ ಅಡಗಿದ ಬೇರೆ ವಿಶೇಷಗಳು ಏನುಂಟು?
- ಕವಿಯ ಇಷ್ಟ ದೈವ ವೀರ ನಾರಾಯಣ. ಪದ್ಯದ ಪ್ರಾರಂಭ ನಾರಾಯಣನಿಂದ. ಕಡೆಯಾದದ್ದು ಶ್ರೀಕೃಷ್ಣನಿಂದ. ಇದು ಕೌರವ-ಪಾಂಡವರ ಕಥೆ ಎಂದು ಮೇಲು ನೋಟಕ್ಕೆ ಕಂಡರೂ, ಇದರ ಕಥಾನಾಯಕ ಶ್ರೀಕೃಷ್ಣನೇ. ಇದನ್ನು ಕವಿ ಹೀಗೆ ಸೂಚಿಸಿದ್ದಾನೆ.
- ನಾರಾಯಣನೇ ಅವತರಿಸಿ ಶ್ರೀಕೃಷ್ಣನಾದ ಎಂದು ಹೇಳಿದಂತಾಯಿತು.
- ಕೆಲವು ಮುಖ್ಯ ಪಾತ್ರಧಾರಿಗಳನ್ನು (ಅರ್ಜುನ, ಭೀಮ, ಧರ್ಮಜ, ಕುಂತಿ, ಇಂದ್ರ, ಶ್ರೀಕೃಷ್ಣ, ಸುಭದ್ರೆ) ಪರಿಚಯಿಸಿದ್ದಾಯಿತು. (ಬೇರೆಯವರು ಯಾಕಿಲ್ಲ ಎಂದು ಕೇಳಬಹುದು. ನೂರು ಮಾತ್ರೆಗಳ ನೆನಪಿಡಬೇಕು).
- ಪಾಂಡವರ-ಯಾದವರ ಕೊಂಡಿ ಇಲ್ಲಿ ಸಿಕ್ಕಿತು.
- ಮಹಾನಾರಾಯಣೋಪನಿಷತ್ತು ಮುಂತಾದುವು ಹೇಳುವಂತೆ ನಾರಾಯಣನು ವೇದಪ್ರತಿಪಾದ್ಯನಾದ ವೇದಪುರುಷನು.
- ನಾರಾಯನಿಗೆ ಅನೇಕ ನೇರ ಮಕ್ಕಳಿದ್ದರೂ ಬ್ರಹ್ಮನೇ ಮೊದಲಿಗನು. ಅಲ್ಲಿಂದ ಸೃಷ್ಟಿ ಪ್ರಾರಂಭ.
- ಚತುರ್ಮುಖನಿಗೆ ಅನೇಕ ಮಾನಸ ಪುತ್ರರಿದ್ದಾರೆ. ಅವರಲ್ಲಿ ಯಾರನ್ನಾದರೂ ತೆಗೆದುಕೊಳ್ಳಬಹುದು. ನಾರದರು ಎಲ್ಲರಿಗೂ ಪರಿಚಿತರು. ಹೀಗಾಗಿ ಅವರನ್ನು ತೆಗೆದುಕೊಳ್ಳುವುದು ವಾಡಿಕೆ.
- ಮಾನಸ ಪುತ್ರರೆಲ್ಲರೂ ಬ್ರಹ್ಮನಿಂದ ನೇರ ಹುಟ್ಟಿದವರಾದದ್ದರಿಂದ ಅವನೇ ತಾಯಿ ಮತ್ತು ತಂದೆ. ಹೀಗೆ ಹುಟ್ಟಿದವರೆಲ್ಲರೂ ಸಹೋದರರು.
- ಅರ್ಜುನನು ಇಂದ್ರನ ವರಪ್ರಸಾದದಿಂದ ಹುಟ್ಟಿದವನು. ಹೀಗಾಗಿ ಮಗನು.
- ಅರ್ಜುನನಿಗೆ ಅನೇಕ ಹೆಂಡತಿಯರಿದ್ದರೂ, ಪಾಂಡವ-ಯಾದವ ಕುಲಗಳ ಕೊಂಡಿ ಸುಭದ್ರೆ.
- ಶ್ರೀಕೃಷ್ಣ-ಬಲರಾಮರಂತೆ ಕಂಸನು ಸುಭದ್ರೆಗೂ ಸೋದರಮಾವ. ದೇವಕಿಯ ಅಣ್ಣ.
- ಕಂಸನು ಜರಾಸಂಧನ ಇಬ್ಬರು ಹೆಣ್ಣು ಮಕ್ಕಳಾದ ಆಸ್ತಿ-ಪ್ರಾಪ್ತಿಯರನ್ನು ಮದುವೆಯಾಗಿದ್ದನು. ಆದ್ದರಿಂದ ಜರಾಸಂಧನು ಕಂಸನಿಗೆ ಹೆಣ್ಣು ಕೊಟ್ಟ ಮಾವ.
- ಭೀಮನ ಅವ್ವೆ ಕುಂತಿಯಾದರೂ ಧರ್ಮರಾಯ ಎಲ್ಲರಿಗೂ ಹಿರಿಯ. ಆದ್ದರಿಂದ ಮುಖ್ಯ. ಅಲ್ಲದೆ ಒಂದು ನೂರು ಮಾತ್ರೆಗಳ ಪದಗಳನ್ನು ಕೂಡಿಸಬೇಕಲ್ಲ!
- ಕುಂತಿಯು ವಸುದೇವನ ಸಹೋದರಿ. ಇಬ್ಬರೂ ಯಾದವ ಶೂರಸೇನನ ಮಕ್ಕಳು. ಅವಳ ಹುಟ್ಟು ಹೆಸರು ಪೃಥಾ. ಶೂರಸೇನನ ತಮ್ಮ ಕುಂತಿಭೋಜನು ಮಕ್ಕಳಿಲ್ಲದ್ದರಿಂದ ಅವಳನ್ನು ದತ್ತು ತೆಗೆದುಕೊಂಡ. ಆಗ ಅವಳ ಹೆಸರು ಕುಂತಿ ಎಂದಾಯಿತು.
- ಕುಂತಿ ಮತ್ತು ವಸುದೇವನ ಹೆಂಡತಿ ದೇವಕಿ ಈ ಕಾರಣದಿಂದ ಅತ್ತಿಗೆ-ನಾದಿನಿಯರು. ಶ್ರೀಕೃಷ್ಣನಿಗೆ ಕುಂತಿ ಸೋದರತ್ತೆ.
Friday, November 28, 2025
ಸಹೋದರಿ, ತಳೋದರಿ ಮತ್ತು ಮಂಡೋದರಿ
ಉದರಂ ಚಿಂತ್ಯಮೀಶಸ್ಯ ತನುತ್ವೇಪ್ಯಖಿಲಂಭರಂವಲಿತ್ರಯಾಂಕಿತ೦ ನಿತ್ಯಂ ಉಪಗೂಢ೦ ಶ್ರೀಯೈಕಯಾ
ತನ್ನ ಹೊಟ್ಟೆಯಲ್ಲಿ ಹದಿನಾಲ್ಕು ಲೋಕಗಳನ್ನು ತುಂಬಿಕೊಂಡಿದ್ದರೂ ಅವನ ಹೊಟ್ಟೆಯು ಬಾಳೆ ಎಲೆಯಂತೆ ತೆಳುವಾಗಿಯೇ ಇದೆ. ಅಷ್ಟು ಮಾತ್ರವಲ್ಲ. ಅವನ ಹೊಟ್ಟೆಯಮೇಲೆ ಮೂರು ಗೆರೆಗಳು ಬೀಳುತ್ತವಂತೆ. ಹೊಟ್ಟೆ ಒಣಗಿಕೊಂಡವರಿಗೆ ಮಾತ್ರ ಈ ರೀತಿ ಗೆರೆಗಳು ಬೀಳುತ್ತವೆ ಎಂದು ನಾವು ನೋಡಿ ತಿಳಿದಿದ್ದೇವೆ. ಆದರೆ ಶ್ರೀಹರಿಯ ಹೊಟ್ಟೆಯ ಮೇಲಿನ ಗೆರೆಗಳು ಸುಲಭವಾಗಿ ಕಾಣುವುದಿಲ್ಲ. ಏಕೆಂದರೆ ಆ ತಾಯಿ ಮಹಾಲಕ್ಷ್ಮಿಯು ಅವನನ್ನು ಯಾವಾಗಲೂ ತಬ್ಬಿಕೊಂಡೇ ಕುಳಿತಿರುತ್ತಾಳೆ. ಅವಳ ಕರುಣೆಯಾದರೆ ಮಾತ್ರ ಸ್ವಲ್ಪ ಪಕ್ಕಕ್ಕೆ ತಿರುಗಿ ನಮಗೆ ಅದರ ದರ್ಶನ ಮಾಡಿಸುತ್ತಾಳೆ!
ಶ್ರೀಹರಿ ಹೀಗಿದ್ದರೆ ಅವನ ಹೆಂಡತಿ ಕಥೆಯೇನು? ಮಹಾಲಕ್ಸ್ಮಿ ದೇವಿಯೂ ತಳೋದರಿಯೇ. ಶ್ರೀಹರಿ ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ. ಮಹಾಲಕ್ಷ್ಮಿಯು ಆಲದೆಲೆಯಾಗಿ ಜೊತೆಗಿದ್ದಳು. (ಛತ್ರ, ಚಾಮರ, ಮಂಚ, ಬೇರೆ ಪದಾರ್ಥಗಳು (ವ್ಯಜನ), ಪಾತ್ರೆ-ಪಡಗ, ಕಡೆಗೆ ಪ್ರಳಯದ ನೀರೂ ಅವಳೇ ಆಗಿ ಅವನನ್ನು ಸುತ್ತುವರೆದಿದ್ದಳು). ಮುಂದೆ ಸೃಷ್ಟಿ ಕಾರ್ಯ ಸಾಗಬೇಕು. ಮಹಾಲಕ್ಷ್ಮಿಯ ಮೂಲಕ ಮಕ್ಕಳು ಪಡೆಯಬೇಕಾದರೆ ತಳೋದರಿಯಾಗಿರುವ ಅವಳು ಬಾಣಂತಿತನದಲ್ಲಿ ಸರಿಯಾಗಿ ಹೊಟ್ಟೆ ಕಟ್ಟದಿದ್ದರೆ ಮುಂದೆ "ಗುಂಡೋದರಿ" ಆಗಬಹುದು. ಹೊಟ್ಟೆ ಕಟ್ಟಲು ಬೇರೆ ಯಾರೂ ಇಲ್ಲ. ಇರುವುದು ಅವರಿಬ್ಬರೇ. ಪಕ್ಕದ ಮನೆಯವರ ಸಹಾಯ ಕೇಳೋಣವೆಂದರೆ ಅಕ್ಕ-ಪಕ್ಕ ಮನೆಗಳೇ ಇಲ್ಲ. ಎಲ್ಲಾ ನೀರಿನಮಯ. ಏನು ಮಾಡುವುದು?
ಯೋಚಿಸಿ ಯೋಚಿಸಿ ಕಡೆಗೆ ಅವಳ ಸೌಂದರ್ಯ ಮಾಸಬಾರದೆಂದು ತನ್ನ ಕರುಳಿನಿಂದಲೇ ಬ್ರಹ್ಮನನ್ನು ಹೆತ್ತ. ಆಮೇಲೆ ಅವನಿಗೆ ಅದೇ ಅಭ್ಯಾಸವಾಗಿಹೋಯಿತು. ಪ್ರಾಣದಿಂದ ವಾಯುವನ್ನು ಹಡೆದ. ಮನಸ್ಸಿನಿಂದ ಚಂದ್ರನನ್ನೂ, ಕಣ್ಣಿನಿಂದ ಸೂರ್ಯನನ್ನೂ ಪಡೆದ. ಮುಖದಿಂದ ಇಂದ್ರನನ್ನೂ ಅಗ್ನಿಯನ್ನೂ ಮಕ್ಕಳಾಗಿ ಪಡೆದ.
ಸೂಕ್ತಗಳ ರಾಜನಾದ "ಪುರುಷ ಸೂಕ್ತ" ಇದನ್ನೇ ಹೇಳುತ್ತದೆ:
ಚಂದ್ರಮಾ ಮನಸೋ ಜಾತಃ ಚಕ್ಷೋ: ಸೂರ್ಯೋ ಅಜಾಯತ
ಮುಖಾತ್ ಇಂದ್ರಶ್ಚ ಅಗ್ನಿಶ್ಚ ಪ್ರಾಣಾತ್ ವಾಯುರಾಜಾಯತ
ಮಕ್ಕಳು ಪಡೆದರೆ ನಿನ್ನ ಚೊಕ್ಕತನವು ಪೋಪುದೆಂದು
ಪೊಕ್ಕುಲೊಳು ಮಕ್ಕಳ ಪಡೆದು ಕಕ್ಕುಲಾತಿ ಮೆರೆವಂತೆ
ಮರಳು ಮಾಡಿಕೊಂಡೆಯಲ್ಲೇ ಮಾಯಾದೇವಿಯೇ!
ಇದರ ಬಗ್ಗೆ ಹೆಚ್ಚಿಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಓದಬಹುದು.
*****
ಈ "ತಳೋದರಿ" ಅನ್ನುವ ಪದವನ್ನು ಕೇವಲ ಒಂದು ಸಾರಿ ಮಾತ್ರ ಉಪಯೋಗಿಸಿ ಅದನ್ನು ವಿಶ್ವ ವಿಖ್ಯಾತ ಮಾಡಿದ ಶ್ರೇಯಸ್ಸು ನಮ್ಮ ಕನ್ನಡದ ಹೆಮ್ಮೆಯ ಕವಿ ಕುಮಾರವ್ಯಾಸ ಬಿರುದಿನ ಗದುಗಿನ ನಾರಾಣಪ್ಪನಿಗೆ ಸೇರಬೇಕು. ಅದು ಹೇಗೆಂದು ಮುಂದಿನ ಸಂಚಿಕೆಯಲ್ಲಿ ನೋಡೋಣ.
Tuesday, November 25, 2025
ಗುರುದ್ರೋಹ?
ಜಾನೇ ಭವಂತಮಹಮಾರ್ಯಜನಾರ್ಥಜಾತಂಅದ್ವೈತರಕ್ಷಣಕೃತೇ ವಿಹಿತಾವತಾರಮ್ಪ್ರಾಗೇವ ಚೇನ್ನಯನವರ್ತ್ರು ಕೃತಾರ್ಥಯೇಥಾ:ಪಾಪಕ್ಷಯಾಯ ನ ತದೇದೃಶಮಾಚರಿಷ್ಯಮ್
"ವೈದಿಕ ಜನರ ಹಿತಕ್ಕಾಗಿ ಅದ್ವೈತ ಸಿದ್ಧಾಂತವನ್ನು ರಕ್ಷಿಸಲು ತಾವು ಅವತಾರ ಮಾಡಿದ್ದೀರೆಂದು ನನಗೆ ಗೊತ್ತಿದೆ. ನನಗೆ ಈ ಮೊದಲೇ ನಿಮ್ಮ ಸಂಪರ್ಕ ಬಂದಿದ್ದರೆ ನಾನು ಪಾಪ ಕಳೆದುಕೊಳ್ಳಲು ಈ ಕೆಲಸ ಮಾಡುತ್ತಿರಲಿಲ್ಲ. (ನಿಮ್ಮ ಭಾಷ್ಯಗಳಿಗೆ ವಾರ್ತಿಕಗಳನ್ನು ಬರೆದು ಪಾಪ ಕಳೆದುಕೊಳ್ಳುತ್ತಿದ್ದೆ. ಹೀಗೆ ತುಷಾಗ್ನಿಗೆ ಆಹುತಿಯಾಗಬೇಕಿರಲಿಲ್ಲ ಎಂದು ಸೂಚನೆ).
ಆಸಕ್ತಿ ಇದ್ದವರು ಮುಂಬೈ ನಗರಕ್ಕೆ ಹೋದಾಗ ನೋಡಬಹುದು.
Sunday, November 23, 2025
ವರ್ಣಮಾತ್ರಂ ಕಲಿಸಿದಾತಂ ಗುರು
ಹಿತವಂ ತೋರುವನಾತ್ಮಬಂಧು ಪೊರೆವಾತಂ ತಂದೆ ಸದ್ಧರ್ಮದಾಸತಿಯೇ ಸರ್ವಕೆ ಸಾಧನಂ ಕಲಿಸಿದಾತಂ ವರ್ಣಮಾತ್ರಂ ಗುರುಕೃತಿಮಾರ್ಗಂ ಬಿಡದಾತ ಸುವ್ರತಿ ಮಹಾಸಾದ್ವಿದ್ಯೆಯೇ ಪುಣ್ಯದಂಸುತನೇ ಸದ್ಗತಿದಾತನೈ ಹರಹರಾ ಶ್ರೀ ಚನ್ನ ಸೋಮೇಶ್ವರಾ
"ಒಳ್ಳೆಯದನ್ನು ಮಾಡುವವನೇ ನೆಂಟನು. (ಆಪತ್ತಿಗಾದವನೇ ನೆಂಟ ಅನ್ನುವ ಗಾದೆ ನೆನಪಿಸುವುದು). (ಬಾಲ್ಯದಲ್ಲಿ) ಕಾಪಾಡಿದವನೇ ತಂದೆ. (ಹೆತ್ತಮಾತ್ರಕ್ಕೆ ತಂದೆಯಾಗುವುದಿಲ್ಲ!). ಎಲ್ಲ ಸಾಧನೆಗೂ ಹೆಂಡತಿಯೇ (ಹೆಂಗಸರಿಗೆ ಗಂಡನೇ?) ಕಾರಣ. (ಹೆಂಡತಿಯ ಸಹಕಾರವಿಲ್ಲದಿದ್ದರೆ ಸಾಧನೆ ಸೊನ್ನೆ). ಒಂದಕ್ಷರ ಕಲಿಸಿದವನೂ ಗುರುವೇ. ಸರಿಯಾದ ದಾರಿಯಲ್ಲಿ ನಡೆಯುವವನೇ ಮುನಿ ಎನ್ನಿಸಿಕೊಳ್ಳುವವನು. ಒಳ್ಳೆಯ ರೀತಿ ಬದುಕುವುದನ್ನು ಕಲಿಸುವುದೇ ಬ್ರಹ್ಮವಿದ್ಯೆ. ಮಗನೇ ಸದ್ಗತಿ ಕೊಡುವವನು" ಎನ್ನುವುದು ಇದರ ತಾತ್ಪರ್ಯ.
"ವರ್ಣಮಾತ್ರಂ ಕಲಿಸಿದಾತಂ ಗುರು" ಎಂದು ನಾವು ಮತ್ತೆ ಮತ್ತೆ ಕೇಳುವುದು ಈ ಶತಕ ಪದ್ಯದ ಒಂದು ವಾಕ್ಯಖಂಡ ಮಾತ್ರ.
*****
ಹಿಂದೊಂದು ಸಂಚಿಕೆಯಲ್ಲಿ "ಪಂಡಿತರ ಮನೆ ಎಲ್ಲಿದೆ?" ಎನ್ನುವ ಶೀರ್ಶಿಕೆಯ ಅಡಿಯಲ್ಲಿ ಮಹಾವಿದ್ವಾಂಸರಾದ ಶ್ರೀ ಕುಮಾರಿಲ ಭಟ್ಟರು ಶ್ರೀ ಶಂಕರಾಚಾರ್ಯರು ಅವರನ್ನು ನೋಡಲು ಬರುವ ಸಮಯಕ್ಕೆ ತುಷಾಗ್ನಿಯಲ್ಲಿ ಸುಟ್ಟುಕೊಂಡು ಪ್ರಾಣಾರ್ಪಣೆ ಮಾಡುವ ಸಂಗತಿ ನೋಡಿದ್ದೆವು. ಗುರುದ್ರೋಹ ಮಾಡಿದ ಕಾರಣಕ್ಕೆ ಅವರಿಗೆ ಅವರೇ ಈ ಶಿಕ್ಷೆ ಕೊಟ್ಟುಕೊಂಡಿದ್ದರು. (ಇಲ್ಲಿ ಕ್ಲಿಕ್ ಮಾಡಿ ಈ ಸಂಚಿಕೆಯನ್ನು ಓದಬಹುದು).
ಈ ಸಂದರ್ಭವನ್ನು ವಿವರಿಸುವ ಶ್ರೀ ವಿದ್ಯಾರಣ್ಯ ಸ್ವಾಮಿಗಳ ರಚನೆ ಎನ್ನುವ "ಶ್ರೀ ಶಂಕರ ದಿಗ್ವಿಜಯ" ಕೃತಿಯಲ್ಲಿ ಕಂಡು ಬರುವ ಒಂದು ಶ್ಲೋಕ ಹೀಗಿದೆ (ಏಳನೆಯ ಸರ್ಗ, ನೂರನೆಯ ಶ್ಲೋಕ):
ಏಕಾಕ್ಷರಸ್ಯಾಪಿ ಗುರು: ಪ್ರದಾತಾ
ಶಾಸ್ತ್ರೋಪದೇಷ್ಟಾ ಕಿಮು ಭಾಷಣೀಯಂ
ಅಹಂ ಹಿ ಸರ್ವಜ್ಞ ಗುರೊರಧೀತ್ಯ
ಪ್ರತ್ಯಾದಿಶೇ ತೇನ ಗುರೋರ್ಮಹಾಗ:
Friday, November 21, 2025
ಪ್ರಶ್ನಪತ್ರಿಕೆ
Monday, November 17, 2025
ದೇವರ ಎಲೆ
ಕುತೋ ಮುಂಡೀ ಗಲಾನ್ಮುಂಡೀಪಂಥಾಸ್ತೇ ಪೃಚ್ಛತಾ ಮಯಾಕಿಮಾಹ ಪಂಥಾ ತ್ವನ್ಮಾತಾಮುಂಡೇತ್ಯಾಹ ತಥೈವಹಿ
ಮಿಶ್ರರು "ಕುತೋಮುಂಡೀ?" ಎಂದು ಕೇಳಿದರು. "ತಲೆ ಬೋಳಿಸಿಕೊಂಡಿರುವ ಯತಿಯೇ, ಎಲ್ಲಿಂದ ಬಂದೆ?" ಎಂದು ಪ್ರಶ್ನೆ. ಇದಕ್ಕೆ ಆಚಾರ್ಯರು "ಎಲ್ಲಿಂದ ಬೋಳಿಸಿದೆ?" ಎಂದು ಅರ್ಥಮಾಡಿ "ಗಲಾನ್ಮುಂಡೀ", ಅಂದರೆ "ಕುತ್ತಿಗೆಯಿಂದ ಮೇಲೆ ಬೋಳಿಸಿದೆ", ಎಂದು ಉತ್ತರ ಕೊಟ್ಟರು.
ಇದರಿಂದ ಕೆರಳಿದ ಮಿಶ್ರರು "ಪಂಥಾಸ್ತೇ ಪೃಚ್ಛತಾ ಮಯಾ" ಎಂದರು. "ನಾನು ಕೇಳಿದ್ದು ದಾರಿಯನ್ನು" ಎಂದು ಪ್ರಶ್ನೆ. ಇದಕ್ಕೆ ಆಚಾರ್ಯರು "ದಾರಿಯನ್ನು ಕೇಳಿದೆ" ಎಂದು ಅರ್ಥಮಾಡಿ "ಕಿಮಾಹ ಪಂಥಾ?", "ದಾರಿಯನ್ನು ಕೇಳಿದೆಯಲ್ಲಾ, ಅದು ಏನು ಹೇಳಿತು?", ಎಂದು ಪುನಃಪ್ರಶ್ನೆ ಮಾಡಿದರು.
ಮಿಶ್ರರು ಮತ್ತಷ್ಟು ಕೋಪಗೊಂಡರು. "ತ್ವನ್ಮಾತಾ ಮುಂಡೇತ್ಯಾಹ", ಅಂದರೆ "ನಿನ್ನ ತಾಯಿ ವಿಧವೆ ಎಂದಿತು" ಎಂದು ಹೇಳಿದರು. ಆಚಾರ್ಯರು "ತಥೈವಹಿ", ಅಂದರೆ "ಹಾಗಿದ್ದರೆ ಸರಿ" ಅಂದರು. ("ದಾರಿಯನ್ನು ಪ್ರಶ್ನೆ ಕೇಳಿದ್ದು ನೀನು. ಅದು ಕೊಟ್ಟ ಉತ್ತರವೂ ನಿನಗೇ ಸೇರಿದ್ದು. ಅಂದರೆ ಅದಕ್ಕೂ ನನಗೂ ಸಂಬಂಧವಿಲ್ಲ" ಎಂದು ಅರ್ಥ).
ಪ್ರಶ್ನೋತ್ತರ ಎಲ್ಲಿಂದ ಎಲ್ಲಿಗೋ ಹೋಯಿತು ಎಂದು ಮತ್ತೆ ಹೇಳಬೇಕಾಗಿಲ್ಲ. ಹೀಗೇ ಸಂಭಾಷಣೆ ಮುಂದುವರೆಯಿತು.
*****
ಇದೆಲ್ಲವನ್ನೂ ಜೈಮಿನಿ-ವ್ಯಾಸರು ನೋಡುತ್ತಿದ್ದರು. ಈಗ ವ್ಯಾಸರು ಮಧ್ಯೆ ಪ್ರವೇಶಿಸಿದರು.
"ಮಿಶ್ರರೇ, ಬಂದಿರುವವರು ಯತಿಗಳು. ಬಂದಿರುವುದು ಶ್ರಾದ್ಧಕಾಲ. ಹೀಗಿರುವಾಗ ಅವರೊಡನೆ ಹೀಗೆ ಸಂವಾದ ಸಲ್ಲದು. ಬಂದಿರುವುದು "ಶ್ರಾದ್ಧ ಸಂರಕ್ಷಕನಾದ ಶ್ರೀ ಮಹಾವಿಷ್ಣು" ಎಂದು ತಿಳಿದು ಅವರನ್ನು ಸತ್ಕರಿಸಿರಿ" ಎಂದರು.
ಮಿಶ್ರರಿಗೆ ತಮ್ಮ ತಪ್ಪಿನ ಅರಿವಾಯಿತು. ತಕ್ಷಣ ಆಚಾರ್ಯರನ್ನು "ಭಿಕ್ಷಾ ಸ್ವೀಕಾರ" ಮಾಡಬೇಕೆಂದು ಕೋರಿದರು. ಆಚಾರ್ಯರು "ನನಗೆ ವಾದಭಿಕ್ಷೆ ಬೇಕು. ಅನ್ನದ ಭಿಕ್ಷೆ ಅಲ್ಲ" ಅಂದರು. ಮಿಶ್ರರು "ತಮ್ಮೊಡನೆ ವಾದ ಮಾಡುವುದು ಒಂದು ಭಾಗ್ಯವೇ. ಆದರೆ ಇಂದು ಶ್ರಾದ್ಧ ಕಾಲ. ಇಂದು ಈ ಭಿಕ್ಷಾ ಸ್ವೀಕರಿಸಿ. ವಾದ ನಾಳೆ ನಡೆಯಬಹುದು" ಎಂದರು. ಆಚಾರ್ಯರು ಒಪ್ಪಿದರು.
ಆಚಾರ್ಯರಿಗೆ ಮತ್ತೊಂದು ಎಲೆಯಲ್ಲಿ ಬಡಿಸಿ ಭಿಕ್ಷಾಸ್ವೀಕಾರ ಆಯಿತು. ಜೈಮಿನಿ-ವ್ಯಾಸರನ್ನು ಕೂಡಿಸಿಕೊಂಡು ಶ್ರಾದ್ಧ ಕರ್ಮವೂ ನಡೆಯಿತು. ಹೀಗೆ ಮಿಶ್ರರು "ಯತಿಭಿಕ್ಷಾ" ಮತ್ತು "ಶ್ರಾದ್ಹಕಾರ್ಯ" ಎರಡನ್ನೂ ನಡೆಸಿದರು.
ಮಾರನೆಯ ದಿನದಿಂದ ನಡೆದ ಐತಿಹಾಸಿಕ ವಾದದ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಎಂಟು ದಿನಗಳ ಅಖಂಡ ವಾದದಲ್ಲಿ ಸೋತ ಮಂಡನ ಮಿಶ್ರರು ಆಚಾರ್ಯರಿಂದ ಸನ್ಯಾಸ ಸ್ವೀಕರಿಸಿ "ಶ್ರೀ ಸುರೇಶ್ವರಾಚಾರ್ಯ" ಎಂದು ಪ್ರಸಿದ್ಧರಾದರು.
*****
ಕಾಶ್ಮೀರದ ರಾಜಧಾನಿ ಶ್ರೀನಗರ ಪಟ್ಟಣದ ಹೊರಭಾಗದಲ್ಲಿ "ಶಂಕರಾಚಾರ್ಯ ದೇವಾಲಯ" ಎಂದು ಹೆಸರಿನ ಸಣ್ಣ ಬೆಟ್ಟ ಇದೆ. ಅಲ್ಲಿ ಒಂದು ಶಿವನ ದೇವಾಲಯವಿದೆ. ಅದರ ಗರ್ಭಗುಡಿಯ ಕೆಳಭಾಗದಲ್ಲಿ ಒಂದು ಗುಹೆಯಿದೆ. ಶ್ರೀ ಶಂಕರಾಚಾರ್ಯರು ಈ ಗುಹೆಯಲ್ಲಿ ವಾಸಿಸಿ ತಪಸ್ಸು ಮಾಡಿದರೆಂದು ಹೇಳುತ್ತಾರೆ. (ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್ಈ ಮಾಡಿ ಓದಬಹುದು). ಬೆಟ್ಟದ ದೇವಾಲಯದಿಂದ ನೋಡಿದರೆ ಒಂದು ಕಡೆ "ದಾಲ್ ಲೇಕ್" ಸರೋವರ ಕಾಣುತ್ತದೆ. ಅದರ ಬಳಿ "ಸುರೇಶ್ವರಿ" ಎನ್ನುವ ಹೆಸರಿನ ದೇವಿಯ ದೇವಾಲಯವೊಂದು ಇತ್ತಂತೆ. ಈಗ ಇಲ್ಲ. "ಕಾಶ್ಮೀರಪುರವಾಸಿನಿ" ಶಾರದೆಯನ್ನು ನಮ್ಮ ಕರ್ನಾಟಕಕ್ಕೆ ಕರೆತಂದು ಶೃಂಗೇರಿಯಲ್ಲಿ ನೆಲೆಯಾಗುವಂತೆ ಮಾಡಿದ ಮಹಾನುಭಾವರು ಶ್ರೀ ಶಂಕರಾಚಾರ್ಯರು. ಹಾಗೆಯೇ ಶ್ರೀ ಸುರೇಶ್ವರಾಚಾರ್ಯರನ್ನು ಶೃಂಗೇರಿ ಪೀಠದ ಮೊದಲ ಮಠಾಧೀಶರಾಗಿ ನೇಮಿಸಿದರು.
ಮಂಡನ ಮಿಶ್ರರ ಮನೆಯಲ್ಲಿ ನಡೆದ ಈ ಘಟನೆ ನಂತರ ಶ್ರಾದ್ಧಗಳಲ್ಲಿ "ಶ್ರಾದ್ಧ ಸಂರಕ್ಷಕ ಶ್ರೀ ಮಹಾವಿಷ್ಣು" ಬಂದಿದ್ದಾನೆ ಎಂದು ಭಾವಿಸಿ "ದೇವರ ಎಲೆ" ಹಾಕುವ ಸಂಪ್ರದಾಯ ನಡೆದು ಬಂದಿದೆ. (ದ್ವೈತಿಗಳಲ್ಲಿ ಈ ಸಂಪ್ರದಾಯ ಇಲ್ಲ). ಜ್ಞಾನವೃದ್ಧರು ಮತ್ತು ವಯೋವೃದ್ಧರೊಬ್ಬರನ್ನು ಕರೆದು ಈ ಎಲೆಯಲ್ಲಿ ಭೋಜನಕ್ಕೆ ಕೂಡಿಸುತ್ತಿದ್ದರು. ಅಥವಾ ಆ ಸಮಯದಲ್ಲಿ ಅನಿರೀಕ್ಷಿತವಾಗಿ ಬಂದ ಅತಿಥಿಗೆ ಅಲ್ಲಿ ಅವಕಾಶ ಇತ್ತು. ಯಾರೂ ಬಾರದಿದ್ದರೆ ನಂತರ ಮನೆಯ ಹಿರಿಯರು ಅಥವಾ ಶ್ರಾದ್ಧ ಮಾಡುವ ಕರ್ತೃಗಳಲ್ಲಿ ಒಬ್ಬರು ಅಲ್ಲಿ ಭೋಜನ ಮಾಡುತ್ತಿದ್ದರು.
"ನಾಲ್ಕು ಮಾತುಗಳು" ಅನ್ನುವ ಸಂಚಿಕೆಯಲ್ಲಿ ಶ್ರಾದ್ಧ ಕರ್ಮಗಳಲ್ಲಿ ದೌಹಿತ್ರರ ಆಹ್ವಾನದ ವಿಷಯ ಬಂದಿದೆ. (ವಿವರಗಳನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು). ಮಿತ್ರರೊಬ್ಬರು ದೌಹಿತ್ರರು ಹೆಣ್ಣಾಗಿದ್ದರೆ ಈ ಎಲೆಯಲ್ಲಿ ಭೋಜನ ಮಾಡಲು ಕೂಡಿಸುತ್ತಾರೆ ಎಂದು ತಿಳಿಸಿದ್ದಾರೆ. ಅವರವರ ಮನೆಯ ಸಂಪ್ರದಾಯದಂತೆ ಇದು ನಡೆಯುತ್ತದೆ.
ಹೀಗೆ ನಡೆದುಬಂದಿರುವ "ದೇವರ ಎಲೆ" ಒಂದು ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆ ಇರುವ, ಬಹಳ ಗೌರವದಿಂದ ಕೂಡಿರುವ ಆಚರಣೆ.
Sunday, November 16, 2025
ಪಂಡಿತರ ಮನೆ ಎಲ್ಲಿದೆ?
ಸ್ವತಃ ಪ್ರಮಾಣಂ ಪರತಃ ಪ್ರಮಾಣಂಕೀರಾಂಗನಾ ಯತ್ರ ಗಿರಂ ಗಿರಂತಿದ್ವಾರಸ್ಥ ನೀಡಾಂತರ ಸಂನಿರುದ್ಧಾಜಾನೀಹಿ ತಂ ಮಂಡನಮಿಶ್ರ ಗೇಹಂಫಲಪ್ರದಂ ಕರ್ಮ ಫಲಪ್ರದೋಜ:ಕೀರಂಗನಾ ಯತ್ರ ಗಿರಂ ಗಿರಂತಿದ್ವಾರಸ್ಥ ನೀಡಾಂತರ ಸಂನಿರುದ್ಧಾಜಾನೀಹಿ ತಂ ಮಂಡನ ಪಂಡಿತೌಕಃ