Showing posts with label Ganesha. Show all posts
Showing posts with label Ganesha. Show all posts

Sunday, June 29, 2025

ಮನವ ಕಬ್ಬಿಣ ಮಾಡು, ಹೇ ಮೃಡನೇ!


"ದೇವರಲ್ಲಿ ಬೇಡುವುದು ಸರಿಯೇ?" ಎಂಬ ಹಿಂದಿನ ಸಂಚಿಕೆಯಲ್ಲಿ ನಾವು ನಂಬಿದ, ಆರಾಧಿಸುವ  ದೇವರು-ದೇವತೆಗಳಲ್ಲಿ ಅನೇಕ ವಿಧವಾಗಿ ವರಗಳನ್ನು ಕೇಳಿಕೊಳ್ಳುವ ರೀತಿ, ಮತ್ತು ಅದರ ಸರಿ-ತಪ್ಪು ಎನ್ನುವ ವಿಚಾರವಾಗಿ ಚರ್ಚೆ ಮಾಡಿದೆವು. ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಾವು ದಿನಂಪ್ರತಿ ಉಪಯೋಗಿಸುವ ಅನೇಕ ಸ್ತೋತ್ರ-ಮಂತ್ರಗಳಲ್ಲಿ ಈ ರೀತಿಯ ಬೇಡುವಿಕೆ ವಿಶಾಲವಾಗಿ ಹರಡಿದೆ. ಅನೇಕರು ಬಹಳ ಭಕ್ತಿ-ಶ್ರದ್ಧೆಗಳಿಂದ ಅನುಷ್ಠಾನ ಮಾಡುವ ಇಂತಹ ಒಂದು ಆಚರಣೆ ರುದ್ರ-ಚಮಕಗಳ ಪಾರಾಯಣಾದಿಗಳು. ಅದರ ತಿರುಳು ಕೆಲವರಿಗೆ ಅರ್ಥವಾಗುತ್ತದೆ. ಅನೇಕರಿಗೆ ಗೊತ್ತಾಗುವುದಿಲ್ಲ. ಆದರೆ ನುರಿತವರು ಅದನ್ನು ಹೇಳುವಾಗ ಕೇಳುಗರೆಲ್ಲರಿಗೂ ಒಂದು ವಿಶೇಷ ಅನುಭವ ಆಗುವುದು ಅಲ್ಲಿ ಕುಳಿತು ಕೇಳಿದವರಿಗೆ ಗೊತ್ತು. ಇಲ್ಲಿಯೂ ಅನೇಕ ಬೇಡಿಕೆಗಳನ್ನು ರುದ್ರದೇವರ ಮುಂದೆ ಇಡುವುದು ಉಂಟು. ಇದರ ಬಗ್ಗೆ ತಿಳಿದವರು ಚೆನ್ನಾಗಿ ವಿವರಿಸಬಲ್ಲರು. ಆದರೂ ನಮ್ಮ ಯೋಗ್ಯತೆ ಇರುವಷ್ಟು ನೋಡುವುದರಲ್ಲಿ ತಪ್ಪೇನೂ ಇಲ್ಲ. 

*****

ಇದೊಂದು ನಮಗೆ ಬೇಕೇ ಬೇಕಾದ ಅತಿ ಹತ್ತಿರದ ಕುಟುಂಬ. ಒಬ್ಬ ಮಗನಾದ ಗಣೇಶನು ವಿಘ್ನಗಳನ್ನು ದೂರಮಾಡಿ ಎಲ್ಲವನ್ನೂ ಸುಗಮ ಮಾಡುವ "ಸುಮುಖ". ಇನ್ನೊಬ್ಬ ಮಗ ದೇವಸೇನಾಪತಿಯಾದ "ಕುಮಾರ". ತಾಯಿಯು ಬುದ್ಧಿ ಶಕ್ತಿಯ ಅಭಿಮಾನಿ ದೇವತೆಯಾದ "ಉಮಾದೇವಿ". ಮತಿ ಪ್ರೇರಕಳು. ತಂದೆಯಾದರೋ ಮನೋಭಿಮಾನಿ "ಮಹರುದ್ರದೇವರು". ಎಲ್ಲ ಸಾಧನೆಗಳ ದಾರಿಯಲ್ಲಿ ಬರುವ ತೊಂದರೆಗಳನ್ನು ನಿವಾರಿಸಲು ವಿಘ್ನೇಶ. ಸಾಧನೆಗಳಿಗೆ ಅಡ್ಡಿ ಪಡಿಸುವ ಆಸುರೀಶಕ್ತಿಗಳನ್ನು ಹತ್ತಿಕ್ಕಲು ದೇವತೆಗಳ ಸೇನಾಧಿಪತಿಯಾದ ಷಣ್ಮುಖ. ಕಪಿಯಂತೆ ದಿಕ್ಕಾಪಾಲಾಗಿ ಓಡುವ ಮನಸ್ಸು ನಿಯಂತ್ರಿಸಿ ಏಕಾಗ್ರತೆ ಸಾಧಿಸಲು ಶಂಭುವಿನ ಕರುಣೆ. ಸಾಧನೆಗೆ ಬುದ್ಧಿಯನ್ನು ಕೇಂದ್ರೀಕರಿಸಲು ಗಿರಿಜೆಯ ಅನುಗ್ರಹ. ಈ ಕುಟುಂಬವನ್ನು ಬಿಟ್ಟು ಸಾಧಕನಿಗೆ ಬೇರೆ ಗತಿಯಿಲ್ಲ. 

ಶ್ರೀ ಪುರಂದರದಾಸರು ತಮ್ಮ ಒಂದು ಉಗಾಭೋಗದಲ್ಲಿ ಇದನ್ನು ಹೀಗೆ ಒಟ್ಟುಗೂಡಿಸಿ ಹೇಳುತ್ತಾರೆ:

ಸತತ ಗಣನಾಥ ಸಿದ್ಧಿಯನೀವ ಕಾರ್ಯದಲಿ 
ಮತಿಪ್ರೇರಿಸುವಳು ಪಾರ್ವತಿದೇವಿ 
ಮುಕುತಿಪಥಕೆ ಮನವೀವ ಮಹರುದ್ರದೇವರು

ರುದ್ರದೇವರು ಸ್ವತಃ ವೈರಾಗ್ಯ ಮೂರ್ತಿಗಳು. ಅವರಿಗಾಗಿ ಏನನ್ನೂ ಇಟ್ಟುಕೊಂಡವರಲ್ಲ. ಆದರೆ ಭಕ್ತರಿಗಾಗಿ ಎಲ್ಲವನ್ನೂ ಕೊಡಬಲ್ಲವರು!
***** 

ನಮ್ಮ ಕುಟುಂಬದಲ್ಲಿ ಒಂದು ಸೊಗಸು. ನಮ್ಮ ಅಪ್ಪನ ತಂದೆಯ ಕಡೆ (ಪಿತಾಮಹ ವಂಶ) ಮಹಾವಿಷ್ಣುವಿನ ಆರಾಧಕರು. ನಮ್ಮ ಅಪ್ಪನ ತಾಯಿಯ ಕಡೆ (ಮಾತಾಮಹ ವಂಶ) ರುದ್ರದೇವರ ಆರಾಧಕರು. ಇವರ ಮನೆಯಲ್ಲಿ ಎಲ್ಲ ಆಚರಣೆಗಳೂ ಈ ರೀತಿ. ಅವರ ಮನೆಯಲ್ಲಿ ಎಲ್ಲ ಆಚರಣೆಗಳೂ ಆ ರೀತಿ. ಇದು ಹಿಂದಿನ ಮೂರು ತಲೆಮಾರುಗಳಿಂದ ನಡೆದುಬಂದಿತ್ತು. ಉಭಯ ಕುಟುಂಬಗಳಲ್ಲೂ ಒಳ್ಳೆಯ ಸಾಮರಸ್ಯ ನಡೆದಿತ್ತು. ಈ ವಿಷಯವಾಗಿ ಎಂದೂ ಭಿನ್ನಾಭಿಪ್ರಾಯ ಬಂದಿರಲಿಲ್ಲ. ಅವರವರ ನಂಬಿಕೆ, ಆಚರಣೆಗಳು ಅವರವರಿಗೆ. ಅವರ ಹಬ್ಬ-ಉತ್ಸವಗಳಿಗೆ ಇವರು ಹೋಗುವರು. ಇವರ ಹಬ್ಬ-ಆಚರಣೆಗಳಿಗೆ ಅವರು ಬರುವರು. ಒಂದು ಕುಟುಂಬದ ಉಪಸ್ಥಿತಿಯಿಲ್ಲದೆ ಇನ್ನೊಂದು ಕುಟುಂಬದ ಯಾವ ಸಮಾರಂಭವೂ ನಡೆಯದು.  ಹೀಗೆ ನಡೆದುಬಂದಿತ್ತು. 

ನಮ್ಮ ತಂದೆಯವರಿಗೆ ಇಬ್ಬರು ಸೋದರಮಾವಂದಿರು. ಅವರಿಬ್ಬರೂ ವಯಸ್ಸಿನಲ್ಲಿ ನಮ್ಮ ಅಜ್ಜಿಗಿಂತ (ಅವರ ಅಕ್ಕ) ಚಿಕ್ಕವರು. ದೊಡ್ಡ ಸೋದರಮಾವ ತಂದೆಯವರಿಗಿಂತ ಮೂರು ವರುಷ ದೊಡ್ಡವರು. ಚಿಕ್ಕ ಸೋದರಮಾವ ತಂದೆಯವರಿಗಿಂತ ಕೆಲವು ತಿಂಗಳು ದೊಡ್ಡವರು. ಹೀಗಾಗಿ ಇವರು ಮೂವರೂ ಒಂದೇ ಓರಗೆಯವರು. ಜೊತೆಯಲ್ಲಿ ಬೆಳೆದವರು. ಮಾವಂದಿರು - ಸೋದರಳಿಯ ನೆಂಟತನಕ್ಕಿಂತ ಹೆಚ್ಚಾಗಿ ಸ್ನೇಹಿತರು. ಮೂವರೂ ಸೇರಿದಾಗ ವಿನೋದ ಪ್ರಧಾನವಾಗಿ ಕಾಲ ಕಳೆಯುತ್ತಿತ್ತು. 

ನಾನು ಶಾಲೆಗಳಲ್ಲಿ ಓದುತ್ತಿದ್ದಾಗ ತಂದೆಯವರ ಜೊತೆ ಅವರಿರುವಲ್ಲಿಗೆ ಹೋಗುತ್ತಿದ್ದೆ. ಅವರುಗಳ ಮಾತಿನ ವಿಷಯ ಕೆಲವು ವೇಳೆ ಅರ್ಥವಾಗುತ್ತಿತ್ತು. ಕೆಲವು ವೇಳೆ ಇಲ್ಲ. ಆಗ ಕೇಳಿದ ಕೆಲವು ವಿಷಯಗಳು ಮುಂದೆ ಎಂದೋ ನೆನಪಿಗೆ ಬಂದು, ನಮ್ಮ ಜೀವನಾನುಭವದ ಹಿನ್ನೆಲೆಯಲ್ಲಿ  ಅರ್ಥವಾಗಿವೆ. ಇದು ನನ್ನೊಬ್ಬನ ವಿಶೇಷ ಎಂದು ಮಾತ್ರವಲ್ಲ. ಅನೇಕರಿಗೆ ಅವರವರ ಜೀವನಗಳಲ್ಲಿ ಇದೇ ರೀತಿ ಅನುಭವಗಳು ಆಗಿರುತ್ತವೆ. 
*****

ನಮ್ಮ ಬಾಲ್ಯದಲ್ಲಿ ಪ್ರತಿ ಊರಿನಲ್ಲೂ ಪ್ರತಿವರುಷ ಊರಹಬ್ಬ ಆಚರಿಸುತ್ತಿದ್ದರು. ಈಗಲೂ ಅನೇಕ ಕಡೆ ನಡೆಯುತ್ತವೆ. ಊರಹಬ್ಬಕ್ಕೆ ಬಹಳ ಪ್ರಾಮುಖ್ಯತೆ ಇತ್ತು. ಹೊರಗಡೆ ಪ್ರದೇಶಗಳಲ್ಲಿ ಓದು, ಕೆಲಸ, ವ್ಯವಹಾರ ಮುಂತಾದ ಕಾರಣಗಳಿಂದ ವಾಸಿಸುತ್ತಿದ್ದ ಜನರು ಊರಹಬ್ಬಕ್ಕೆ ಬಂದು ಸೇರುತ್ತಿದ್ದರು. ಬಂಧು-ಬಾಂಧವರನ್ನು ಮತ್ತು ಸ್ನೇಹಿತರನ್ನು ವರುಷಕ್ಕೊಮ್ಮೆ ನೋಡಲು ಇದು ಒಂದು ಒಳ್ಳೆಯ ಅವಕಾಶವಾಗಿತ್ತು. ಬೆಂಗಳೂರಿನಲ್ಲಿ ಪ್ರತಿ ವರುಷ ಚಿತ್ರಾಪೂರ್ಣಿಮೆ (ಉಗಾದಿಯನಂತರ ಬರುವ ಹುಣ್ಣಿಮೆ) ಊರಹಬ್ಬ ನಡೆಯುತ್ತದೆ. ಅದು "ಬೆಂಗಳೂರು ಕರಗ" ಎಂದು ಪ್ರಸಿದ್ಧಿ. "ಕೆಂಪೇಗೌಡ ದಿನಾಚರಣೆ" ಎಂದೂ ಕರೆಯುತ್ತಾರೆ. ಈಗಲೂ ಬಹಳ ವಿಜೃಂಭಣೆಯಿಂದ  ನಡೆಯುತ್ತದೆ. ಹತ್ತಾರು ದೇವಾಲಯಗಳು ತಮ್ಮ ಉತ್ಸವ ಮೂರ್ತಿಗಳನ್ನು ಕರೆತಂದು ಸಿಟಿ ಮಾರ್ಕೆಟ್ ಬಳಿ ಸೇರುತ್ತಾರೆ. ಬೇರೆ ಊರುಗಳಲ್ಲಿಯೂ ಹೀಗೆಯೇ ಉಂಟು. 

ಒಮ್ಮೆ ತಂದೆಯವರ ಜೊತೆಗೆ ಅವರ ತೌರುಮನೆಗೆ (ತನ್ನ ತಾಯಿಯ ಹುಟ್ಟಿದ ಮನೆಯನ್ನು ಅವರು ಕರೆಯುತ್ತಿದ್ದುದು ಹೀಗೆಯೇ. ತೌರುಮನೆ ಅಂದರೆ "ತಾಯಿಯ ಮನೆ". ಅದು ಗಂಡಸರಿಗೆ ಏಕೆ ಇರಬಾರದು? ಎಂದು ಕೇಳುತ್ತಿದ್ದರು!) ಹೋಗಿದ್ದೆ. ಆಗ ಕೆಂಗೇರಿ ಬೇರೆಯ ಊರಾಗಿತ್ತು. ಈಗಿನಂತೆ ಬೆಂಗಳೂರಿನ ಹೊಟ್ಟೆಯೊಳಗೆ ಸೇರಿಕೊಂಡಿರಲಿಲ್ಲ. ಮಧ್ಯಾನ್ಹದ ಊಟದ ನಂತರ ಮೂವರು ಜೊತೆಗಾರರು ಮನೆಯ ಜಗುಲಿಯ ಮೇಲೆ ಕುಳಿತು ಮಾತಾಡುತ್ತಿದ್ದರು. ನಾನು ಸ್ವಲ್ಪದೂರ ಕುಳಿತು ನೋಡುತ್ತಿದ್ದೆ. 

"ಮುಂದಿನ ತಿಂಗಳು ಊರ ಹಬ್ಬ. ತಪ್ಪದೆ ಬಾ. ಹೋದ ವರುಷದಂತೆ ಚಕ್ಕರ್ ಹಾಕಬೇಡ"
"ನೋಡೋಣ. ಶಾಲೆಗೆ ರಜೆ ಇದ್ದರೆ ಬರುತ್ತೇನೆ"
"ಅದೆಲ್ಲ ಆಗದು. ರಜೆ ಇಲ್ಲದಿದ್ದರೆ ರಜೆ ಹಾಕಿ ಬಾ"
"ಓದುತ್ತಿದ್ದಾಗ ಅವಾಗವಾಗ ಚಕ್ಕರ್ ಹೊಡೆಯುತ್ತಿದ್ದೆ. ಈಗ ಏನು ಕಷ್ಟ?"
ಮೂವರೂ ನಕ್ಕರು. 

ಅಷ್ಟರಲ್ಲಿ ಎದುರು ಮನೆ ಗೃಹಿಣಿ ತನ್ನ ಮಕ್ಕಳು ಕಾಣಲಿಲ್ಲವೆಂದು ಮನೆಯ ಹೊರಗಡೆ ಬಂದು ನೋಡಿದಳು. ಇಬ್ಬರು ಮಕ್ಕಳು ಚೆನ್ನಾಗಿ ಮಣ್ಣಿನಲ್ಲಿ ಆಟ ಆಡುತ್ತಿದ್ದರು. ಮೈಯೆಲ್ಲ ಧೂಳಿನಿಂದ ಮುಚ್ಚಿತ್ತು. ನೋಡಿದ ಅವಳಿಗೆ ಕೋಪ ಬಂತು. "ಆಡಿ, ಆಡಿ; ಚೆನ್ನಾಗಿ ಆಡಿ. ಆಮೇಲೆ ಮನೆಗೆ ಬನ್ನಿ. ನಿಮಗೆ ಹಬ್ಬ ಮಾಡುತ್ತೇನೆ" ಅಂದು ಹೇಳಿ ಒಳಗೆ ಹೋದಳು. 

"ಏನಪ್ಪಾ, ನಿಮ್ಮಣ್ಣ ನನ್ನ ಊರಹಬ್ಬಕ್ಕೆ ಕರೀತಿದಾನೆ. ಅವಳು ನೋಡಿದರೆ ಮಕ್ಕಳಿಗೆ "ಹಬ್ಬ ಮಾಡುತ್ತೇನೆ" ಎಂದು ಹೇಳುತ್ತಿದ್ದಾಳೆ"
"ಅಣ್ಣ ನಿನಗೂ ಅಂತದೇ ಹಬ್ಬ ಮಾಡಬಹುದು. ಹುಷಾರಾಗಿರು"
"ಅಯ್ಯೋ, ಹುಚ್ಚಪ್ಪಗಳಾ. ಸಂದರ್ಭ ನೋಡಿ ಮಾತಿಗೆ ಅರ್ಥ ಮಾಡಬೇಕು. ಒಂದು ಮಾತಿಗೆ ಎಲ್ಲ ಕಡೆಯೂ ಒಂದೇ ಅರ್ಥ ಇರುವುದಿಲ್ಲ. ಇದು ಚೆನ್ನಾಗಿ ಗೊತ್ತಿದ್ದೂ ನನ್ನ ಹಾಸ್ಯ ಮಾಡುತ್ತಿದ್ದೀರಾ?"
ಮೂವರು ಮತ್ತೊಮ್ಮೆ ನಕ್ಕರು. 
*****

ನಂತರ ಕೆಲವು ವರುಷಗಳು ಕಳೆದ ಮೇಲೆ ಹಿರಿಯ ಸೋದರಮಾವ ತಿರುಮಕೂಡಲು ನರಸೀಪುರದಲ್ಲಿ (ಟಿ. ನರಸೀಪುರ) ವಾಸವಾಗಿದ್ದರು. ಒಮ್ಮೆ ಅವರ ಹುಟ್ಟಿದ ಹಬ್ಬ ಬಂದಿತು. ಪ್ರಾಯಶಃ "ಭೀಮರಥಿ ಶಾಂತಿ" ಇರಬಹುದು. (70ನೆಯ ವರುಷದ ಹುಟ್ಟಿದ ಹಬ್ಬವನ್ನು ಭೀಮರಥಿ ಶಾಂತಿ ಎಂಬುದಾಗಿ ಆಚರಿಸುತ್ತಾರೆ). ತಿರುಮಕೂಡಲು ಕಪಿಲ-ಕಾವೇರಿ ನದಿಗಳ ಸಂಗಮ ಕ್ಷೇತ್ರ. ಉತ್ತರ ಭಾರತದಲ್ಲಿ ಗಂಗಾ-ಯಮುನಾ-ಸರಸ್ವತಿ ನದಿಗಳ ಸಂಗಮ ಪ್ರಯಾಗದಲ್ಲಿ ಇರುವಂತೆ ಇಲ್ಲಿ ಕಪಿಲಾ-ಕಾವೇರಿ-ಸ್ಫಟಿಕ ಸರೋವರ ನದಿಗಳ ತ್ರಿವೇಣಿ ಸಂಗಮವೆಂದು ಪ್ರತೀತಿ. ಇಲ್ಲಿನ "ಗುಂಜಾ ನರಸಿಂಹಸ್ವಾಮಿ" ಮತ್ತು "ಅಗಸ್ತ್ಯೇಶ್ವರ" ದೇವಾಲಯಗಳು ಇತಿಹಾಸ ಪ್ರಸಿದ್ಧ. 

"ಗರ್ಗೇಶ್ವರಿ" ಅನ್ನುವುದು ತಿರುಮಕೂಡಲಿನಿಂದ ಮೂರು ಮೈಲು ದೂರದ ಒಂದು ಕ್ಷೇತ್ರ. ಇಲ್ಲಿನ ದೊಡ್ಡ ಶಿವಲಿಂಗ "ಅರ್ಧನಾರೀಶ್ವರ" ಅನ್ನುತ್ತಾರೆ. ಈಗ ಈ ಊರೂ ನರಸೀಪುರದಲ್ಲಿಯೇ ಸೇರಿಹೋಗಿದೆ. ಈ ಗರ್ಗೇಶ್ವರಿ ದೇವಸ್ಥಾನದಲ್ಲಿ ಹುಟ್ಟು ಹಬ್ಬದ ಸಮಾರಂಭದ ಪ್ರಯುಕ್ತ "ಏಕಾದಶವಾರ ರುದ್ರಾಭಿಷೇಕ" ಏರ್ಪಡಿಸಿದ್ದರು. ಜ್ಞಾನವೃದ್ಧರೂ, ವಯೋವೃದ್ಧರೂ ಆದ ಘನಪಾಠಿ ಗುರುಗಳು ಶಿಷ್ಯರ ಸಮೇತ ಆಗಮಿಸಿ ರುದ್ರ-ಚಮಕಗಳ ಅದ್ಭುತ ಪಾರಾಯಣ-ಅಭಿಷೇಕಾದಿಗಳನ್ನು ನಡೆಸಿದರು. 

ಕಾರ್ಯಕ್ರಮ ಮುಗಿದ ನಂತರ ಊಟಕ್ಕೆ ತಯಾರಾಗುವ ವೇಳೆಯಲ್ಲಿ ಈ ಮೂವರೂ ಆ ಗುರುಗಳ ಬಳಿ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದರು. 

"ಗುರುಗಳೇ. ರುದ್ರದೇವರು ಅಖಂಡ ವೈರಾಗ್ಯ ಮೂರ್ತಿಗಳು. ಅವರ ಬಳಿ ನಾವು ಈ ಪ್ರಾರ್ಥನೆಗಳನ್ನು ಮಾಡಿ ಅನೇಕ ವರಗಳನ್ನು ಕೇಳುತ್ತೇವೆ. ಇವುಗಳಲ್ಲಿ ಅನೇಕ ಕೋರಿಕೆಗಳು ಭೌತಿಕ ವಸ್ತುಗಳು. ಈ ನಮ್ಮ ಜೀವನ ಸುಖವಾಗಿರಲು ಕೇಳಿಕೊಳ್ಳುವುವು. ಹೆಚ್ಚೂ-ಕಡಿಮೆ ಪ್ರತಿಯೊಂದು ವಸ್ತುವನ್ನೂ ಕೇಳುತ್ತೇವೆ. ಇದು ಸರಿಯೇ?"
"ಏಕೆ? ಕೇಳಬಾರದೆಂದು ನಿಮ್ಮ ಅಭಿಪ್ರಾಯವೇ?"
"ವೈರಾಗ್ಯ ಮೂರ್ತಿಯ ಬಳಿ ವೈರಾಗ್ಯ ಹುಟ್ಟುವ ರೀತಿಯ ಬೇಡಿಕೆ ಇಡಬೇಕಲ್ಲದೆ ಈ ರೀತಿ ಸುಖ-ಸಾಧನಗಳನ್ನು ಕೇಳುವುದು ನ್ಯಾಯವೇ?"
"ಎಲ್ಲರಿಗೂ ಸುಲಭವಾಗಿ ವೈರಾಗ್ಯ ಬರುವುದಿಲ್ಲವಲ್ಲ?"
"ಅಂದಮಾತ್ರಕ್ಕೆ ವೈರಾಗ್ಯ ಕೇಳದೆ ಈ ಸುಖ ಸಾಧನಗಳನ್ನು ಕೇಳಬಹುದೇ?"

"ಈ ಭೂಮಿಯಲ್ಲಿ ಜೀವನ ಮಾಡುವಾಗ ಇಹ-ಪರ ಎರಡರ ಕುರಿತೂ ಯೋಚಿಸಬೇಕು. ಬಹಳ ಕಡಿಮೆ ಮಂದಿಗೆ ಚಿಕ್ಕ ವಯಸ್ಸಿನಲ್ಲಿ ವೈರಾಗ್ಯ ಬರುತ್ತದೆ. ಸಾಮಾನ್ಯವಾಗಿ ಹೆಚ್ಚಿನ ಮಂದಿಗೆ ಕಾಲಕ್ರಮದಲ್ಲಿ ವೈರಾಗ್ಯ ಬರುವುದು. ಕೆಲವರಿಗಂತೂ ಅದು ಬರುವುದೇಯಿಲ್ಲ. ಸಾಧನೆಗೆ ಅನೇಕ ಪರಿಕರಗಳು ಬೇಕಲ್ಲ. ಇಲ್ಲಿನ ಜೀವನವೂ ಚೆನ್ನಾಗಿ ನಡೆಯಬೇಕು. ನಾವು ವೈಯುಕ್ತಿಕವಾಗಿ ಏನನ್ನೂ ಬೇಡ ಅನ್ನಬಹುದು. ಆದರೆ ಗೃಹಸ್ಥರಾದ ನಮ್ಮನ್ನು ನಂಬಿ ನಮ್ಮ ಜೊತೆ ಬಾಳುವ ಕುಟುಂಬದವರ ವಿಷಯವೇನು? ಸನ್ಯಾಸಿಯಾಗಿ ಗುರುಕುಲ ನಡೆಸುವವನಾದರೂ ಅವನ ಚಿಕ್ಕ ವಯಸ್ಸಿನ ಶಿಷ್ಯವೃಂದದ ಕಥೆ ಏನು? ಒಂಟಿಯಾಗಿ ಸಾಧನೆ ಮಾಡುವವನಿಗೂ, ಅನೇಕ ಮಂದಿಯ ಜೊತೆಯಲ್ಲಿದ್ದು ಸಾಧನೆ ಮಾಡುವವನಿಗೂ ವ್ಯತ್ಯಾಸವಿಲ್ಲವೇ? ಇಲ್ಲಿಯೂ ಚೆನ್ನಾಗಿ ಬಾಳುವೆ ನಡೆಸಬೇಕು. ಮುಂದಿನ ದಾರಿಯೂ ಸರಿಯಾಗಿ ಗೊತ್ತಾಗಬೇಕು. ಈ ಪ್ರಾರ್ಥನೆಗಳು ಎರಡನ್ನೂ ಸರಿತೂಗಿಸಿ ಜೀವನ ನಡೆಸಲು ಬೇಕಾದುವನ್ನು ಕೇಳುತ್ತವೆ. ಇದರಲ್ಲಿ ತಪ್ಪೇನೂ ಕಾಣುವುದಿಲ್ಲ. ಆದರೆ, ಈ ಪರಿಕರಗಳಿಂದ ಸುಖಿಸುವುದರಲ್ಲಿ ಮುಳುಗಿ ಸಾಧನೆಯನ್ನು ಬಿಡಬಾರದು. ಆ ಎಚ್ಚರ ವಹಿಸಬೇಕು. ಆ ರುದ್ರರೇ ಇದನ್ನು ನಡೆಸಿಕೊಡುತ್ತಾರೆ ಎನ್ನುವುದು ಧೃಡವಾದ ನಂಬಿಕೆಯಾಗಿ ಇರಬೇಕು"

"ಒಂದು ಕಡೆ "ಲೋಹವನ್ನು ಕೊಡು ಎಂದು ಕೇಳುತ್ತೇವಲ್ಲ? ಬದುಕು ಹಸನಾಗಲು, ಸುಖಮಯವಾಗಲು ಬೆಳ್ಳಿ-ಬಂಗಾರ ಮುಂತಾದುವನ್ನು ಕೇಳುವ ಬದಲು ಕಬ್ಬಿಣವನ್ನು ಕೇಳುವುದೇ?"

"ಲೋಹ ಎಂದರೆ ಕೇವಲ ಕಬ್ಬಿಣ ಎಂದು ಅರ್ಥ ಮಾಡಬಾರದು. ಬೆಳ್ಳಿ-ಬಂಗಾರಗಳೂ ಲೋಹಗಳೇ ತಾನೇ? ಲೋಹ (ಮೆಟಲ್) ಆನ್ನುವುದು ವಿಜ್ಞಾದಲ್ಲಿಯೂ ಒಂದು ಧಾತುಗಳ ಕುಟುಂಬ. ಇದಲ್ಲದೆ ಅನೇಕ ವ್ಯವಹಾರಗಳಲ್ಲಿ ಮನುಷ್ಯನ ಮನಸ್ಸು ಬೇರೆ ಬೇರೆ ರೀತಿ ಪ್ರಕಟವಾಗುತ್ತದೆ. ಒಮ್ಮೆ "ಅವರದು ಹೂವಿನಂತಹ ಮನಸ್ಸು" ಎನ್ನುತ್ತೇವೆ. ಮತ್ತೊಮ್ಮೆ "ಅವನದು ಕಲ್ಲಿನ ಮನಸ್ಸು" ಅನ್ನುತ್ತೇವೆ. ಏಕೆ ಹೀಗೆ?"

"ವ್ಯವಹರಿಸುವಲ್ಲಿ ಮನಸ್ಸಿನ ಮೃದುತ್ವ ಅಥವಾ ಕಾಠಿಣ್ಯವನ್ನು ಗುರುತಿಸಲು ಹೀಗೆ ಹೇಳುತ್ತೇವೆ"
"ಕಲ್ಲನ್ನು ಭೇದಿಸಲು ಏನು ಬಳಸುತ್ತಾರೆ?"
"ಉಳಿ ಮತ್ತು ಸುತ್ತಿಗೆ"
"ಉಳಿ ಮತ್ತು ಸುತ್ತಿಗೆಯನ್ನು ಬಂಗಾರದಿಂದ ಮಾಡಬಹುದೋ?"
"ಅರ್ಥವಾಗಲಿಲ್ಲ"

"ಕಲ್ಲಿಗಿಂತಲೂ ಕಠಿಣವಾದುದು ಕಬ್ಬಿಣ. ಇಲ್ಲಿ ಲೋಹವನ್ನು ಕೊಡು ಅಂದರೆ ಕಬ್ಬಿಣದ ಉಂಡೆಯನ್ನು ಕೊಡು ಎಂದು ಅರ್ಥವಲ್ಲ. "ಸಾಧನೆಯ ದಾರಿಯಲ್ಲಿ ನಮ್ಮ ಮನಸ್ಸನ್ನು ಕಬ್ಬಿಣದಂತೆ ಗಟ್ಟಿ ಮಾದು" ಎಂದು ಕೇಳುವ ಭಾವ. ಯಾವುದೇ ಪ್ರಲೋಭನೆಗಳಿಗೆ ಮನಸ್ಸು ಮೆದುವಾಗಿ ಸಾಧನೆಯ ದಾರಿಯಿಂದ ವಿಮುಖವಾಗಬಾರದು. ಬೇರೆ ರೀತಿಯ ಸಂಪತ್ತನ್ನು ಕೇಳಿಯಾಗಿದೆ. ಇಲ್ಲಿ ನಮ್ಮ ಮನಸ್ಸನ್ನು ಕಬ್ಬಿಣದಂತೆ ಗಟ್ಟಿ ಮಾಡು ಎಂದು ಕೇಳುವ ಪ್ರಾರ್ಥನೆ. ಸಂದರ್ಭ ನೋಡಿ ಪದಗಳಿಗೆ ಅರ್ಥ ಮಾಡಬೇಕಲ್ಲವೇ?"

ಇನ್ನು ಕೆಲವು ಪ್ರಶ್ನೆಗಳಾದ ಮೇಲೆ ಊಟದ ಕರೆ ಬಂತು.  

*****

ರುದ್ರದೇವರ ಕರುಣೆಯಿಲ್ಲದೆ ಮನಸ್ಸು ಗಟ್ಟಿಯಾಗದು. ಶ್ರೀವಿಜಯದಾಸರು ಶಂಭುವಿನ ಕುರಿತಾದ ಅವರ ಒಂದು ದೇವರನಾಮದಲ್ಲಿ ಹೀಗೆ ಹೇಳುತ್ತಾರೆ:

ಕೈಲಾಸವಾಸ ಗೌರೀಶ ಈಶ 
ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ 
ಕೈಲಾಸವಾಸ ಗೌರೀಶ ಈಶ  
 
ಮನಸು ಕಾರಣವಲ್ಲ ಪಾವ ಪುಣ್ಯಕ್ಕೆಲ್ಲ  
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ 
ದನುಜಗಜ ಮದಹಾರಿ ದಂಡಪ್ರಣಾಮ ಮಾಳ್ಪೆ 
ಮಣಿಸೋ ಈ ಶಿರವನ್ನು ಸಜ್ಜನರ ಚರಣದಲಿ 

ಒಂದು ಪಾತ್ರೆಯಿಂದ ನೀರನ್ನು ಸುರಿಸಿದರೆ ಅದು ಬೀಳುವ ರೀತಿಯನ್ನೂ, ಮತ್ತೊಂದು ಪಾತ್ರೆಯಿಂದ ಎಣ್ಣೆಯನ್ನು ಸುರಿದರೆ ಅದು ಬೀಳುವ ರೀತಿಯನ್ನೂ ಒಟ್ಟಾಗಿ ನೋಡಿದರೆ ವ್ಯತ್ಯಾಸ ಸ್ಪಷ್ಟವಾಗಿ ಕಾಣುತ್ತದೆ. (ಇವನ್ನು ನಾವು ಪ್ರತಿದಿನ ನೋಡುತ್ತಿರುತ್ತೇವೆ. ಗಮನಿಸಿರುವುದಿಲ್ಲ) ಮನಸ್ಸು ಅಲ್ಲಿ-ಇಲ್ಲಿ ಹೋಗದಂತೆ ಒಂದೇ ಧಾರೆಯಾಗಿ ಕೇಂದ್ರೀಕರಿಸಲು ಆ ಶಂಭುವಿನ ಕರುಣೆ ಬೇಕು. 

ಪಂಡಿತ ಭೀಮಸೇನ ಜೋಶಿಯವರು ಹಾಡಿರುವ ಈ ಹಾಡನ್ನು ಇಲ್ಲಿ ಕೇಳಬಹುದು:

https://www.youtube.com/watch?v=KO772laPz3I


******

ಮೇಲಿನ ಹಾಡಿನಲ್ಲಿ "ಮನಸು ಕಾರಣವಲ್ಲ" ಮತ್ತು "ದನುಜ ಗಜ ಮದಹಾರಿ" ಎನ್ನುವ ಪದಗಳ ವಿಶೇಷಾರ್ಥಗಳನ್ನು ಮುಂದೊಮ್ಮೆ ನೋಡೋಣ. 

Sunday, December 4, 2016

Author, Writer and Editor


The words "Author", "Writer" and "Editor" are frequently used in the context of Literature and allied discussions. What is the connection and relation between these words? Do they mean the same thing or do they have different connotations? Are they interchangeable or is there a clear distinction between them? What is the right meaning of these words and when and how they should be used? What are the responsibilities of an author, a writer and an editor? Is there someone who can be considered and quoted as an author, a writer as well as an editor having done all the three different types of work at different times? It is indeed worthwhile to spend a few minutes and ponder over these issues to have a proper understanding of them.
*****

In general parlance, the words writer and author are understood with the same meaning. A writer is one who writes something that can be read by himself and others. "Scribe" is the actual word to be used for such persons. A person who takes down what is dictated to him in the form of words is a writer. A stenographer is thus a writer when he reproduces the dictated part in words. A writer may also create a copy of an existing work or document by making a duplicate of it. There is a subtle difference between a writer and an author. Anyone who has a published independent work to his credit, may be in the form of a book (or e-book nowadays), is considered as an author. Thus there is a clear and major difference between a writer and an author. The writer generally has no responsibility of the contents of the document or piece except for a faithful reproduction of what is dictated to him or available in the original document. He is usually an employee and not an independent person. The term "clerical error" can be attributed to him but not to an author. On the other hand, an author has a legal responsibility and also enjoys the associated rights with the creation of the work. What he creates should be a original work. Authoring a work involves a lot of skills and talent and is usually a product of inspiration. Though the word 'Writer" is often used to mean an author, we have to keep this difference in mind while understanding usage of these two words.

An Editor is one who selects and revises available material for publication or wider reading. Editing is the process of selecting and preparing written material for conveying to others. Nowadays, it can also be extended to visual, audio and film medium where the word "editing" is extensively used to indicate bringing out an acceptable form of communication from out of a large volume of material that may be unintelligible in its original form. Editing involves creative skills and precise set of methods. It is not a mechanical work and requires special traits. An editor ought to be studious, have command over the material or contents of the work and subject he is editing. Editing includes collection, correction, condensation, organization and modifications of the contents. All this is to be done without distorting the intentions of the original author or authors. The basic idea of editing is to bring out a correct, consistent, accurate and complete work. Correction includes rectification of errors that may have crept in the work over a period of time and in spelling and grammar as well. 
*****

What are the duties and responsibilities of an 'Editor" and what are the defects that may crepe in while editing literary works? Saint-philosopher Ananda Tirtha Bhagavatpada of 13th Century, well-known as Shri Madhwacharya for his "Dwaita" philosophy, traveled the length and breadth of the country for collecting the various versions of Mahabharata available at that time. After scrutinizing them he authored his celebrated work "Mahabharata Tatparya Niryana", meaning the proper interpretation of Mahabharata. It is interesting to note that he has made a very pertinent observation about "Editing" in this work. He has enumerated the four different types of errors that crepe in while editing a work and summarized them as under:
क्वचित् ग्रन्थान् प्रक्षिपन्ति क्वचित् अन्तरितानापि |
कुर्यः क्वचिच्चव्यत्यासम् प्रमादात् क्वचिदन्यथा ||

Kwachit granthaan prakshipanti kwachit antaritaanapi
Kuryahkwachiccha vyatyaasam pramadaat kwachidanyathaa

Which are the four errors that come up while editing and an editor should beware? They are:
  1. Interpolation: Addition of what the editor desires - these contents are not there in the original work, but added by the editor since he likes it and wants that to find a place in what the reader ultimately gets to read.
  2. Deletion: Removing portions not liked by him while editing. Editor uses his logic and discretion for removal of part of the contents.
  3. Disorder: Rearranging the contents the way he wants and thus violating the intention of the original author or authors.
  4. Ignorance: Errors that crepe in due to the limited or insufficient knowledge of the editor, resulting in wrong content.
An editor would do well to be aware of these four pitfalls to ensure proper and faithful editing of literary and other works, especially of earlier periods. What is the remedy for an editor if he genuinely feels that he does not concur with the original author and has justifiable reasons for such differences? He has the option of giving his views as a suitable footnote. But he ought not interfere with the contents of the original texts.
*****

That brings us to the important issue of whether there is any person who is an author, a writer as well as an editor? Well, there are many scholars who have enriched literature and other fields in many languages all over the world, by their invaluable contributions as authors, writers and editors. But the foremost and the earliest among them is well known to us. Sage Vyasa, popularly known as Veda Vyasa, is an author, writer as well as editor. He is regarded as the person who classified and edited the Vedas and brought them into present readable form from a maze of large volume of complex works. He wrote many of his other works himself and hence is a writer as well. That he requested and got the assistance of Lord Ganesha as a writer (scribe) and became the author of the epic Mahabharata is indeed a very well-known story!

Saturday, March 17, 2012

Lord Ganesha and Auto Drivers

With another hefty increase in auto fares last week, it is time to remember some auto incidents. One good thing with the current increase is that it solves the problem of finding change to pay auto bills. Minimum fare at twenty rupees is much better than the earlier seventeen rupees. Three rupees were never returned and now we can be satisfied that it has been paid legally. A hundred rupee note is the minimum requirement to get into an auto and fare is always rounded off to the nearest ten rupees. This solves the problem of searching the purse for small change. Beggars who were beneficiaries of the refunded coins also do not mind now. Their minimum acceptance level is also revised upwards and anything less than ten rupees is likely to be returned with some bad words.

Autos are in great demand on festival days. Those are the days when people moving in groups, usually their own families, stand in street corners and hoping that a vacant auto would come their way. Auto drivers also have their own families and they also have their own Lord Ganesha to worship. They are fortunate not to be bound by the list of holidays issued by the Government or an employer. Their family also needs to move around on festival days and hence they work on that day without being paid. The net result of all these is an excessive demand against a poorer supply.

Sometime back I was waiting in a street corner with a friend, who had come from another city, looking for an auto. Many vacant autos ran past us but none responded to our hailing.  He was wondering what was happening. I told him that auto licenses in Bangalore were mostly given to Physically Handicapped persons as a source providing employment to them. As the license cannot be given away to blind persons, most of them were issued to deaf persons. He appreciated the idea and said it was a very good policy and should be emulated by other cities as well. But he also wondered whether it was not a hazard as the drivers would not be able to hear the honking of the other vehicles. I told him it was not so because even those with normal hearing capacity would end up as deaf in a few years due to the abnormal level of honking in the chaotic traffic. Why not start being deaf rather than ending as deaf?  The illogical logic also appealed to him and he appreciated the idea even more. He was to be in our city for a week and got used to the system of hailing autos including shouting with outstretched hands and twisting the whole body. On the last day of the trip I offered to walk him to the street corner for finding an auto to go to railway station. He smiled and replied, "Now I know how to catch an auto. I always shout two words before announcing my destination. Like 'Double meter Jayanagar' or Double meter Malleswaram'. All auto drivers can hear such hailing even if they are otherwise deaf or pretend to be deaf. Do not worry, I will find an auto easily!".

The day veteran Kannada Cinema actor Raj Kumar died was a a nightmare for people in Bangalore, especially for those who were caught in the traffic jam. The auto in which I was sitting was near Kantheerava stadium when government decided to move the actor's body there to enable the people to pay their last respects. We were surrounded by a sea of vehicles with nowhere to go. One had to move in any direction one could find some space to move unmindful of what his destination was. Hundreds of working people, including women and aged, had to walk for miles. My auto driver procured a xerox photo of Raj Kumar by paying ten rupees from a hawker and pinned it on the wind shield. He asked me whether I was a Raj Kumar fan and I said I certainly was since the age of six. We exchanged the names of films we had seen and both of us had seen nearly all his movies. He managed to drive on footpath and anywhere there was some space to go. After three hours of moving in every possible direction he brought me to our house. He politely refused my offer of a higher fare and said it was unfair for him to accept it on a day when his beloved actor died. "I would have refused even the normal fare as a tribute to him and gone home with the pleasure of having taken one of his fans home safely. But the extra driving has consumed all the petrol in the auto. I need money for tomorrow's plying. Hence I have to accept the normal fare much against my will", he said.

Back to Ganesha festival. Some twenty five years  ago I met two auto drivers who had totally opposite view points about the festival. Early morning we set out with our two small children to reach a house where the extended family was to meet to celebrate the festival together. Autos were already in demand by that time and we managed to get one after sometime. I asked the auto driver whether he would perform Ganesha pooja. He said his wife and children demanded that he should stay back that day at home for the festival. But he wanted to be on the road to enable people to move around for their pooja rather than stay at home. As a compromise his entire family got up as early as 3 AM and finished their pooja by 6 AM so that both their wishes were fulfilled. Once pooja done, family members wanted him to join them for lunch in the afternoon. He was ready but with a rider that he will be back again on the road after lunch. His real goal was to serve as many devotees as possible to move around and celebrate the festival.

On the way back in the evening it was nearing 9 PM. We managed to hail another auto and I put the same question to this auto driver too. This man had a different outlook. He said his Ganesha was with the devotees whom he was carrying that day since 5 AM in the morning. You are the last passenger today. After dropping you I am going home. At home every one will be ready for pooja. I join them for pooja and we celebrate the festival now.  My family members have agreed for this arrangement".

Both auto drivers succeeded in satisfying the demands of their family members and yet managed to move a large number of devotees for their festival. It was nice to know that Lord Ganesha also got up very early to accept the pooja from one of them and also stayed awake late in the night to receive offerings from the other!