Showing posts with label Kalidasa. Show all posts
Showing posts with label Kalidasa. Show all posts

Monday, September 22, 2025

ಒಂದು ಕಪ್ಪು ಚುಕ್ಕೆ


ಕಳೆದ ವಾರದ ಎರಡು ಸಂಚಿಕೆಗಳಾದ "ಯಯಾತಿಯ ಮೊಮ್ಮಕ್ಕಳು" ಮತ್ತು ಅದರ ಮುಂದಿನ ಭಾಗವಾದ "ಮಾಧವಿಯ ಮಕ್ಕಳು" ಅನೇಕ ಪ್ರತಿಕ್ರಿಯೆಗಳನ್ನು ತಂದಿವೆ. (ಈ ಸಂಚಿಕೆಗಳನ್ನು ಇಲ್ಲಿ ಕ್ಲಿಕ್ ಮಾಡಿ ಓದಬಹುದು). ವಿಶೇಷವಾಗಿ ಕನ್ನಡದ ಒಂದು ಪ್ರಸಿದ್ಧ ಕೃತಿ, ಖ್ಯಾತ ಲೇಖಕ, ನಟ, ನಿರ್ದೇಶಕ, ಜ್ಞಾನ ಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಾಡ್ ಅವರ "ಯಯಾತಿ" ನಾಟಕ ಓದಿರುವವರು, ಅದರ ಪ್ರಯೋಗವನ್ನು ರಂಗಮಂಚದ ಮೇಲೆ ನೋಡಿದವರು ಕಳಿಸಿರುವ ಪ್ರತಿಕ್ರಿಯೆಗಳು. ಕೆಲವರು ಇದರ ಬಗ್ಗೆ ಪ್ರಶ್ನೆಗಳನ್ನು ಹಾಕಿ, ಸ್ವಲ್ಪ ವಿಸ್ತಾರ ಮಾಡಬೇಕೆಂದು ಕೇಳಿದ್ದಾರೆ. ಈ ಸಂಚಿಕೆಗಳಲ್ಲಿರುವ ಅಂಶಗಳನ್ನು ಒಳಗೊಂಡಂತೆ ಒಂದು ರಂಗನಾಟಕ ಬರೆಯಬೇಕೆಂದೂ ಅನೇಕರು ಸಲಹೆ ನೀಡಿದ್ದಾರೆ. 

ಸಾಮಾನ್ಯವಾಗಿ ಅನೇಕ ಓದುಗರು ಮಹಾಭಾರತ, ಭಾಗವತ ಮತ್ತು ಹಲವು ಪುರಾಣಗಲ್ಲಿರುವ ಚಂದ್ರವಂಶದವರ ಕುರಿತಾದ ಬಲು ವಿಸ್ತಾರವಾದ ಸರಕನ್ನು ಓದಿರುವುದಿಲ್ಲ. ಅದು ಎಲ್ಲರಿಗೂ ಸಾಧ್ಯವಾಗುವುದೂ ಇಲ್ಲ. ಅವುಗಳ ಗಾತ್ರ ಬಲು ದೊಡ್ಡದು. ಜೊತೆಗೆ ಮೂಲ ಕೃತಿಗಳು ಇರುವುದು ಸಂಸ್ಕೃತದಲ್ಲಿ. ಕಳೆದ ತಲೆಮಾರಿನ ಮತ್ತು ಇಂದಿನ ಅನೇಕ ಸಾಹಿತಿಗಳು ರಾಮಾಯಣ ಮತ್ತು ಮಹಾಭಾರತದ ಯಾವುದಾದರೂ ಒಂದು ಎಳೆಯನ್ನು ಹಿಡಿದು, ಅದರ ವಿಸ್ತಾರದಲ್ಲಿ ತಮ್ಮ ಕೃತಿಗಳ ರಚನೆ ಮಾಡಿರುತ್ತಾರೆ. ವ್ಯಾಸ, ವಾಲ್ಮೀಕಿಗಳ ಸೆಳೆತ, ಸತ್ವ ಅಂತಹುದು. ಈ ಮಹಾಮಹಿಮರು ಸೃಷ್ಟಿಸಿರುವ, ಬಣ್ಣಿಸಿರುವ ಪಾತ್ರ ಪ್ರಪಂಚ ಎಲ್ಲರನ್ನೂ ಅಯಸ್ಕಾಂತದಂತೆ ಆಕರ್ಷಿಸುತ್ತದೆ. ಅಂತಹ ಬೃಹತ್ ಕೃತಿಗಳನ್ನು ಹೊಸದಾಗಿ ನಿರ್ಮಾಣ ಮಾಡುವ ಸಾಹಸಕ್ಕೆ ಯಾರೂ ಕೈ ಹಾಕಿಲ್ಲ. 

ಯಾವುದೋ ಒಂದು ಪಾತ್ರದ ಒಂದು ಒಳ್ಳೆಯ ಗುಣವನ್ನೋ, ದುರ್ಗುಣವನ್ನೋ ಹಿಗ್ಗಿಸಿ ಮರುಸೃಷ್ಟಿ ಮಾಡಿದ ಕೃತಿಗಳು ಅತ್ಯಂತ ಜನಪ್ರಿಯವಾದಾಗ ಅವುಗಳಲ್ಲಿ ಬಿಂಬಿತವಾದ ಹೂರಣವೇ ಸತ್ಯವೆಂದು ಸಾಮಾನ್ಯ ಜನ ನಂಬುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಅದರಲ್ಲಿಯೂ ಅರ್ಥ, ಕಾಮಗಳ ಪ್ರಪಂಚ, ಇನ್ನೂ ವಿಶೇಷವಾಗಿ ದೈಹಿಕ ಕಾಮದ ವಿವರಣೆಗಳ ಆಕರ್ಷಣೆ ಹಾಗೆ. ಇದರಲ್ಲಿ ತಪ್ಪೇನೂ ಇಲ್ಲ. ಇದೂ ಸಹ ಮನುಷ್ಯನ ಸಹಜ ಜೀವನದ ಒಂದು ಮುಖವೇ. ಹೀಗಿದ್ದಾಗ ಯಾವುದೋ ಸಂದರ್ಭದಲ್ಲಿ ಬೇರೆ ಸಂಗತಿಗಳು ಗಮನಕ್ಕೆ ಬಂದಾಗ "ಒಹೋ, ಹೀಗೂ ಉಂಟೋ!" ಎಂದು ಆಶ್ಚರ್ಯ ಆಗುತ್ತದೆ. 

*****

ಯಾವುದೇ ಒಂದು ವಿಷಯದ ಮೇಲೆ ಚರ್ಚೆ ನಡೆದಾಗ ಪರಸ್ಪರ ವಿರೋಧ ದಿಕ್ಕಿನ ವಿಚಾರಗಳು ಬರುವುದು ಸಹಜ. ಒಬ್ಬ ವ್ಯಕ್ತಿಯಲ್ಲಿ ಅಥವಾ ಒಂದು ಪದಾರ್ಥದಲ್ಲಿ ಅನೇಕ ಗುಣಗಳಿದ್ದಾಗ ಒಂದು ಅವಗುಣ (ದುರ್ಗುಣ) ಕಂಡರೆ ಅದು ಹೇಗೆ ಧ್ವನಿತವಾಗುತ್ತದೆ ಎನ್ನುವುದಕ್ಕೆ ಕೆಳಗಿನ ಉದಾಹರಣೆ ನೋಡಬಹುದು. 

ಕವಿಕುಲಗುರು ಕಾಳಿದಾಸನು ತನ್ನ "ಕುಮಾರಸಂಭವ" ಮಹಾಕಾವ್ಯದ ಮೊದಲ ಸರ್ಗದ ಮೂರನೆಯ ಪದ್ಯದಲ್ಲಿ ಹೀಗೆ ಹೇಳುತ್ತಾನೆ:

ಅನಂತರತ್ನ ಪ್ರಭವಸ್ಯ ಯಸ್ಯ ಹಿಮಂನ ಸೌಭಾಗ್ಯವಿಲಾಪಿಜಾತಂ 
ಏಕೋಹಿ ದೋಷೋ ಗುಣಸನ್ನಿಪಾತೇ ನಿಮಜ್ಜತೀಂದೋಃ ಕಿರಣೀಶ್ವಿವಾಂಕಃ 

ಹಿಮಾಲಯದಲ್ಲಿ ಬೇಕಾದಷ್ಟು ಶ್ರೇಷ್ಠ ವಸ್ತುಗಳಿವೆ. ಆದ್ದರಿಂದ ಎಲ್ಲೆಡೆಯೂ ಹಿಮವಿದ್ದರೂ ಅದರ ಯೋಗ್ಯತೆ ಕಡಿಮೆಯಾಗಲಿಲ್ಲ. ಚಂದ್ರನ ಕಾಂತಿಯಲ್ಲಿ ಅವನ ಕಳಂಕವು ಮರೆಯಾದಂತೆ ಅನೇಕ ಗುಣಗಳಿಂದ ಒಂದು ದೋಷವೇ ಮರೆಯಾಗುತ್ತದೆ. 

ಇದಕ್ಕೆ ವಿರುದ್ಧವಾಗಿ ಶೃಂಗಾರ ಪ್ರಕಾಶ ಹೀಗೆ ಹೇಳುತ್ತದೆ: 

ಏಕೋಹಿದೋಷೋ ಗುಣಸನ್ನಿಪಾತೇ ನಿಮಜ್ಜತೀಂದೋರಿತಿ ಯೋ ಬಭಾಷೇ 

ತೇನಾಪಿ ನೂನಂ ಕವಿನಾ ನ ದೃಷ್ಟ೦ ದಾರಿದ್ರ್ಯದೋಷ: ಗುಣರಾಶಿನಾಶೀ 

ಅನೇಕ ಗುಣಗಳಿದ್ದಾಗ ಒಂದು ದೋಷವು ಮುಚ್ಚಿಹೋಗುತ್ತದೆ ಎಂದು ಹೇಳಿದ ಕವಿಗೆ, ದಾರಿದ್ರ್ಯ (ಬಡತನ) ಎನ್ನುವ ಒಂದು ದೋಷವೇ ಎಲ್ಲಾ ಗುಣಗಳನ್ನೂ ನುಂಗಿಹಾಕುತ್ತದೆ ಎನ್ನುವುದು ಕಾಣಲಿಲ್ಲ! 

ಹೀಗೆ ಪರಸ್ಪರ ಅಭಿಪ್ರಾಯ ಭೇದವಿರುವುದು ಸರಿಯಾದರೂ ಇಲ್ಲಿ ಒಟ್ಟಾರೆ ಆಗುವ ಪರಿಣಾಮ ಸನ್ಮಾರ್ಗ ಪ್ರೇರಕವೇ ಆಗಿದೆ. ದಾರಿದ್ರ್ಯದ ಭೀಕರತೆ ತೋರಿಸಿದರೂ, ಅದು ಬಡತನವನ್ನು ಅತಿಯಾಗಿ ಗಮನಿಸದೆ ಗುಣಗ್ರಾಹಿಯಾಗಬೇಕೆಂದು ಸೂಚಿಸುತ್ತದೆ. 

*****

ಪರಮಪುರುಷನೊಬ್ಬನೇ ಸಕಲ ದೋಷದೂರನಾದವನು. ಅವನೊಬ್ಬನೇ ಅನಂತ ಕಲ್ಯಾಣಗುಣ ಪರಿಪೂರ್ಣ. ಇದು ಒಂದು ಪ್ರಮೇಯ. ಅನೇಕ ತಾತ್ವಿಕ ನಿಲುವುಗಳು ಇದರ ಮೇಲೆ ನಿಂತಿವೆ. ಆದ್ದರಿಂದ ಪರಮಾತ್ಮನನ್ನು ನೆನೆಯುವುದು ಅಂದರೆ ಅವನ ಅನಂತ ಗುಣಗಳಲ್ಲಿ ನಮಗೆ ಚಿಂತನೆಗೆ ಸಿಲುಕುವ, ನಿಲುಕುವ ಗುಣಗಳ ಚಿಂತನೆಯೇ ಆಗಿದೆ. ಬೇರೆಯ ದೇವತೆಗಳೂ, ಮನುಷ್ಯರೂ ಈ ಅಳತೆಯಲ್ಲಿ ಕಡಿಮೆ ಬೀಳುವುದು ಸಹಜವೇ. ಎಲ್ಲ ದೇವತೆಗಳೂ, ಮನುಷ್ಯರೂ ದೋಷ ದೂರರಾದರೆ, ಸಕಲ ಗುಣಗಳ ಖನಿಗಳಾದರೆ, ಅವರು ಮನುಷ್ಯರಾಗಿಯೋ ಅಥವಾ ದೇವತೆಗಳಾಗಿಯೋ ಉಳಿಯುವುದಿಲ್ಲ. ಅವರೂ ದೇವರೇ ಆಗಿಬಿಡುತ್ತಾರೆ!

ಇಂತಹ ಪರಿಸ್ಥಿತಿಯಲ್ಲಿ ನಮ್ಮ ದೃಷ್ಟಿಕೋನ ಹೇಗಿರಬೇಕು? ನಮ್ಮ ಹಿರಿಯ ಸ್ನೇಹಿತರೊಬ್ಬರು ಸೂಚಿಸಿರುವಂತೆ "ನಾವು ಗುಣಾನ್ವೇಷಣೆಯಲ್ಲಿ ತೊಡಗಬೇಕೇ ಹೊರತು ದೋಷಾನ್ವೇಷಣೆಯಲ್ಲಿ ಅಲ್ಲ". ರಾಮಾಯಣ, ಮಹಾಭಾರತ, ಪುರಾಣಗಳು ಮುಂತಾದುವುಗಳಲ್ಲಿ ಕಂಡು ಬರುವ ದುಷ್ಟ ಪಾತ್ರಗಳನ್ನೇ ವೈಭವೀಕರಿಸಿ, ಅವರನ್ನೇ ನಾಯಕರುಗಳನ್ನಾಗಿ ಮಾಡಿ ರಚಿಸಿರುವ ಸಾಹಿತ್ಯ ಎಲ್ಲ ಭಾಷೆಗಳಲ್ಲಿ ವಿಪುಲವಾಗಿಯೇ ಇವೆ. ಸಾಹಿತ್ಯದ ಮೂಲೋದ್ದೇಶ "ರಸಾಸ್ವಾದನೆ" ಆದುದರಿಂದ ಆ ದೃಷ್ಟಿಯಲ್ಲಿ ಇದು ಅಸಾಧುವೂ ಅಲ್ಲ. ಆದರೆ ಅದು ಅಲ್ಲಿಗೇ ನಿಲ್ಲಬೇಕು. ಅದನ್ನು ಬಿಟ್ಟು ಇಂತಹ ವ್ಯಾಖ್ಯಾನಗಳೇ ಸತ್ಯ ಎಂದು ಜನಜನಿತವಾದರೆ ಮೂಲ ಕೃತಿಗಳ ಮೂಲಭೂತ ಆಶಯಕ್ಕೇ ಕೊಡಲಿಪೆಟ್ಟು ಬೀಳುತ್ತದೆ. 

ಪ್ರಾಚಾರ್ಯ ತಿ. ನಂ. ಶ್ರೀ ಅವರು ತಮ್ಮ "ಭಾರತೀಯ ಕಾವ್ಯ ಮೀಮಾಂಸೆ" ಮೇರು ಕೃತಿಯಲ್ಲಿ ಹೇಳಿರುವಂತೆ "ಓದುವಾಗ ರಸಾಸ್ವಾದವೇ ಮುಖ್ಯವಾದರೂ, ಅದರಿಂದ ಒದಗುವ ಆನಂದವೇ ಪ್ರಿಯವಾದರೂ, ಅಂತ್ಯ ಪ್ರಯೋಜನ ಅದರಿಂದ ಒದಗುವ ಸಂಸ್ಕಾರ". ಇನ್ನೂ ಸ್ವಲ್ಪ ಮುಂದೆ ಅವರು ಸೂಚಿಸುವಂತೆ "ವಾಚಕನ ಮನಸ್ಸು ಸಂಸ್ಕಾರ ಹೊಂದಿ, ಅವನಿಗೆ ಧರ್ಮಾಧರ್ಮಗಳ ಪರಿಜ್ಞಾನ ಒದಗಿ, ಸನ್ಮಾರ್ಗದಲ್ಲಿ ನಡೆಯಬೇಕೆಂಬ ಪ್ರವೃತ್ತಿ ಉಂಟಾಗುವುದೇ ಸಾಹಿತ್ಯದ ಪರಮ ಪ್ರಯೋಜನ. ಇದನ್ನೇ ಸತ್ಪ್ರೇರಣೆ ಅನ್ನುತ್ತಾರೆ". 

ಕೃತಿ ರಚನಾ ಸ್ವಾತಂತ್ರ್ಯ ಎಲ್ಲರಿಗೂ ಉಂಟು. ಆದರೆ ಕಡೆಗೆ "ಕೃತಿಯ ಒಟ್ಟಾರೆ ಪರಿಣಾಮ ಏನಾಗುವುದು?" ಎನ್ನುವುದನ್ನೂ ಗಮನಿಸಬೇಕಾಗುತ್ತದೆ. ಭೀಕರ ಅಪರಾಧಗಳನ್ನು ಮಾಡಿ ನಿಭಾಯಿಸಿಕೊಂಡವರ ಬಗ್ಗೆ ಚಲನಚಿತ್ರಗಳು ಬಂದಿವೆ. ಅವುಗಳನ್ನು ನೋಡಿ ಅದನ್ನೇ ಅನುಕರಿಸಿ ಅಪರಾಧಗಳನ್ನು ಮಾಡಿ ಸಿಕ್ಕಿಹಾಕಿಕೊಂಡವರು ಇಂತಹ ಚಿತ್ರಗಳೇ ಅವರ ಪ್ರೇರಕ ಶಕ್ತಿ ಎಂದು ಹೇಳಿರುವುದು ಗಮನಿಸಬೇಕಾದ ಅಂಶ. ಅಭಿವ್ಯಕ್ತಿ ಸ್ವಾತಂತ್ರ್ಯ, ರಸಾನುಭವ, ಮನರಂಜನೆ, ಜನಪ್ರಿಯತೆ ಇವೆಲ್ಲವೂ ಮುಖ್ಯವಾದರೂ ಸಮಾಜದ ಮೇಲೆ ಆಗುವ ಪೂರ್ಣ ಪರಿಣಾಮವೂ ಅಷ್ಟೇ ಮುಖ್ಯ ಎನ್ನುವುದು ಗಮನಿಸಬೇಕಾದ ಅಂಶ. 

*****

ಚಕ್ರವರ್ತಿ ಯಯಾತಿ ವಿಷಯದಲ್ಲಿ ಗಮನಿಸುವುದಾದರೆ, ಅವನನ್ನು ಕೇಂದ್ರೀಕರಿಸಿ ಮರಾಠಿ ಭಾಷೆಯ ಶ್ರೇಷ್ಠ ಲೇಖಕರಲ್ಲಿ ಒಬ್ಬರಾದ ಶ್ರೀ ವಿಷ್ಣು ಸಖಾರಾಮ ಖಾಂಡೇಕರ್ ಅವರು 1959 ರಲ್ಲಿ ಮರಾಠಿಯಲ್ಲಿ "ಯಯಾತಿ" ಏನುವ ಹೆಸರಿನ ಕಾದಂಬರಿ ಹೊರತಂದರು. ಅವರಿಗೆ ಈ ಕಾದಂಬರಿ ಬಹಳ ಕೀರ್ತಿ ತಂದಿತು. 1974 ವರ್ಷದ "ಜ್ಞಾನಪೀಠ" ಪ್ರಶಸ್ತಿಯೂ ಅವರಿಗೆ ಈ ಪುಸ್ತಕಕ್ಕಾಗಿ ಸಿಕ್ಕಿತು. 

ಎರಡು ವರ್ಷಗಳ ನಂತರ, 1961 ರಲ್ಲಿ ಕನ್ನಡದಲ್ಲಿ "ಯಯಾತಿ" ನಾಟಕ ರೂಪದಲ್ಲಿ ಶ್ರೀ ಗಿರೀಶ್ ಕಾರ್ನಾಡ್ ಅವರಿಂದ ಹೊರಬಂತು. ಈ ಕೃತಿ ರಚಿಸಿದಾಗ ಅವರಿಗೆ ಕೇವಲ 23 ವರ್ಷ ವಯಸ್ಸು. ಆ ಚಿಕ್ಕ ವಯಸ್ಸಿನಲ್ಲೇ ಇಂತಹ ಪ್ರಖರ ಕೃತಿ ಹೊರತಂದಿದ್ದು ಅವರ ಅಪಾರ ಪ್ರತಿಭೆಗೆ ಸಾಕ್ಷಿ. ಮುಂದೆ ಅವರು ಮಾಡಿದ ಒಟ್ಟಾರೆ ಸಾಹಿತ್ಯ ಸೇವೆಗೆ ಅವರಿಗೆ 1998 ರಲ್ಲಿ "ಜ್ಞಾನಪೀಠ" ಪ್ರಶಸ್ತಿ ಸಿಕ್ಕಿತು. 

ಮಹಾಭಾರತ ಮತ್ತು ಪುರಾಣಗಳಲ್ಲಿ ಸಿಗುವ ಯಯಾತಿಯ ಪೂರ್ತಿ ವಿವರಗಳನ್ನು ಗಮನಿಸಿದಾಗ ಅವನು ತನ್ನ ಮಗನಿಂದ ಯೌವನ ಪಡೆದುದು ಒಂದು ಆಕಸ್ಮಿಕ. ದೇವಯಾನಿಯ ದೂರಿನ ಕಾರಣವಾಗಿ ದೈತ್ಯಗುರು ಶುಕ್ರಾಚಾರ್ಯರಿಗೆ ಬಂದ ಕೋಪದ ಫಲಶ್ರುತಿಯಾಗಿ ಅವರು ಯಯಾತಿಗೆ "ಅಕಾಲ ವೃದ್ಧಾಪ್ಯ ಬರಲಿ" ಎಂದು ಶಾಪ ಕೊಟ್ಟರು. ಹೀಗೆ ಶಾಪ ಬಂದಾಗ ಅವನು ಅವರಲ್ಲಿ ಕ್ಷಮೆ ಬೇಡಿ ವಿಶಾಪ ಕೋರಿದಾಗ ಅವರು ತೋರಿಸಿದ ದಾರಿ ಯಾವುದು? "ನಿನ್ನ ಮಕ್ಕಳಲ್ಲಿ ಯಾರಾದರೂ ನಿನ್ನ ವೃದ್ಧಾಪ್ಯ ತೆಗೆದುಕೊಂಡು ಅವನ ಯೌವನ ನಿನಗೆ ಕೊಟ್ಟರೆ ತೆಗೆದುಕೋ" ಎಂದರು! ಅವನು ಆ ದಾರಿಯಲ್ಲಿ ಹೋದ. ತಾನಾಗಿ ಅದನ್ನು ಕೇಳಿದವನಲ್ಲ. ಮುಂದೆ ಒಂದು ಸಾವಿರ ವರುಷ ಮಗನ ಯುವತನ ಪಡೆದಿದ್ದನಂತೆ. ಕಡೆಗೆ ಏನು ಮಾಡಿದರೂ, ಎಷ್ಟು ಭೋಗ ಸವಿದರೂ, ತೃಪ್ತಿಯಾಗುವುದಿಲ್ಲ ಎಂದು ತಿಳಿಯಿತು. ಆಗ ತಕ್ಷಣ ಅದೇ ಮಗನಿಗೆ ಯೌವನ ಹಿಂದಿರುಗಿಸಿ ವಾನಪ್ರಸ್ಥಕ್ಕೆ ಹೊರಟ. ಈ ಘಟನೆ ಅವನ ಜೀವನದಲ್ಲಿ ನಡೆದ ಒಂದು ದುರ್ದೈವದ ನಡೆ. 

ಮಗನ ಯೌವನ ಪಡೆದ ಅವನನ್ನು ನೋಡುವ ಎರಡು ದೃಷ್ಟಿ ಕೋಣಗಳು ಇವೆ. ಒಂದರಲ್ಲಿ ಗಂಡ ತನ್ನ ಬಳಿ ಬಂದಾಗ ಅವನ ಹೆಂಡತಿ "ನನ್ನ ಹತ್ತಿರ ಬರಬೇಡ. ನಿನ್ನಲ್ಲಿ ನನ್ನ ಮಗ ಕಾಣಿಸುತ್ತಾನೆ" ಎಂದು ಹೇಳುವುದು. ಇನ್ನೊಂದರಲ್ಲಿ ಅವನ ಸೊಸೆ ಅವನ ಬಳಿ ಬಂದು "ಈಗ ನೀನೇ ನನ್ನ ಗಂಡ" ಅನ್ನುವುದು. ಒಂದು ಆ ವಯಸ್ಸಿಗೆ ತಕ್ಕ ಉದಾತ್ತತೆ. ಇನ್ನೊಂದು ಈ ವಯಸ್ಸಿಗೆ ತಕ್ಕ ಅವಶ್ಯಕತೆ. ಯಾವುದು ಸರಿ ಎಂದು ಹೇಳುವಂತಿಲ್ಲ. ಅದರ ಜಾಗದಲ್ಲಿ ಅದು ಸರಿ. ಇದರ ಜಾಗದಲ್ಲಿ ಇದು ಸರಿ. 

*****

ಯಯಾತಿಯ ತಂದೆ ನಹುಷ ಚಕ್ರವರ್ತಿಯ ಮಹಾಭಾರತ, ಪುರಾಣಗಳ ಚಿತ್ರಣದ ದೋಷವೊಂದನ್ನು ಪರಿಹರಿಸಿ ದೇವುಡು ನರಸಿಂಹ ಶಾಸ್ತ್ರಿಗಳು "ಮಹಾಕ್ಷತ್ರಿಯ" ಎನ್ನುವ ದಿವ್ಯ ಪೌರಾಣಿಕ ಕಾದಂಬರಿ ಕೊಟ್ಟರು. ದುಷ್ಯಂತನ ಒಂದು ದೋಷವನ್ನು ಒಂದು ಉಂಗುರದ ಪ್ರಭಾವವನ್ನು ತಂದು ಪರಿಹರಿಸಿ ಮಹಾಕವಿ ಕಾಳಿದಾಸನು "ಅಭಿಜ್ಞಾನ ಶಾಕುಂತಲ" ನಾಟಕವನ್ನು ಕೊಟ್ಟ. 

ಅಭಿವ್ಯಕ್ತಿ ಸ್ವಾತಂತ್ರ್ಯ, ಕೃತಿ ರಚಿಸುವವನ ಪ್ರತಿಭೆ, ಸಮಾಜದಲ್ಲಿ ಇರುವ ಸಂಬಂಧಗಳು ಮತ್ತು ಮೌಲ್ಯಗಳ ಹಿನ್ನೆಲೆಯಲ್ಲಿ ಆಯಾ ಕೃತಿಗಳ ವಿಮರ್ಶೆ ಮಾಡಬೇಕಲ್ಲದೆ, ಯಯಾತಿಯ ಬಗ್ಗೆ ನಮ್ಮ ಒಟ್ಟಾರೆ ಅಭಿಪ್ರಾಯ ರೂಪಿಸುವ ತುಲನೆ ಮಾಡುವಾಗ ಅವನ ವ್ಯಕ್ತಿತ್ವದ ಒಂದು ಕಪ್ಪು ಚುಕ್ಕೆಯನ್ನೇ ಗಮನಿಸಿ ಮಿಕ್ಕ ವಿಶಾಲ ಶುಭ್ರ ಶ್ವೇತ ಗುಣಗಳನ್ನು ಮರೆಯಬಾರದೆಂಬುದೇ ಇಷ್ಟೆಲ್ಲಾ ಚರ್ಚೆಯ ಆಶಯ. ಹಾಗೆ ಮಾಡಿದರೆ ಅದು ಕಳಂಕವಿದೆ ಎಂದು ಚಂದ್ರನನ್ನೇ ಪಕ್ಕಕ್ಕೆ ತಳ್ಳಿದ ಹಾಗೆ. 

Monday, April 27, 2015

He is a "Big Yardstick!"


They had come from far and wide; from all parts of the country.  There were families with young boys and girls, old couples and young men and women.  All of them assembled at Gate 15 of the Departure lounge of the Delhi International Airport.  The gate enclosure itself was a small area with not even sufficient chairs to seat the older people.  They stood for over an hour at the boarding gate for the announcement of a flight that had a special number - 555.  Almost all of them were on a vacation and were visibly excited.  That the lounge was small did not dampen their spirits; it probably enhanced their excitement.

The flight was expected to take one and half hours.  It took off on schedule and the first one hour was uneventful.  Suddenly some kids got up and started to take pictures from the aircraft’s windows.  Those on the window side seats were probably doing that already.  Taking pictures from the aircraft is prohibited, but nobody seemed to bother about it.  Even the air hostesses smiled away.  For a few minutes most of the passengers were out of their seats and clicking.  Mobile phones have made photo-taking very easy now.  Of course, the thrill of carrying a camera, purchasing film, loading them, clicking photos, sending it for developing and printing and thereafter waiting eagerly for the printed snaps is long dead and gone.  I strongly suspect that the value of photos itself is now compromised.  Whatever it is, this was a time to click away.  And all of them did it in plenty.  Most of them would not have read or heard about Kumarasambhavam.  But to understand Himalayas that was not required.  His very presence was enough and more.

Mahakavi Kalidasa has described Himalayas as the majestic yardstick, standing to the north of our country and the King of Mountains.  Kalidasa starts his celebrated Mahakaavya “Kumara Sambhavam” with this praise of the Mountains.  The Himalayas is not just another mountain range for the Mahakavi; he is the symbol of the ethos of our lofty values.  His size is just too great and hence he is called a yard stick.  Was he justified in calling Himalayas as a yardstick?  He is a yardstick for measuring the Earth.  When we consider the size of the Himalayan Range we realize how right Mahakavi Kalidasa was!  To measure the size of the Earth, we require a yardstick of the size of Himalayas as nothing else will suffice.  Earth’s diameter is said to be about 12,720 Kilometers or 7900 miles.  The Himalayan Range extends from west to east for a length of 2400 Kilometers or 1500 miles.  Therefore, it is easy to measure the size of the earth using the Himalayas as the yard stick.  Earth’s diameter is 5.3 yards if Himalayas is one yard!  This is not a yard of three feet.  That yard is only for measuring very small things. 

Those on the flight could get a clear view of the Himalayas as the flight was approaching Srinagar.  It was a clear and sunny day and enabled viewing the snow clad mountain peaks, flowing rivers and the evergreen forests.  It did not matter that they were flying at 34,000 feet. They were not looking at a small hill; it was the Himalayas who stretched as far as the eyes could see and comprehend.

The Himalayan range has nine out of ten highest peaks in the world.  Geologists say that this is one of the youngest mountain ranges in the world.  The range gives birth to innumerable rivers and the big three siblings are The Sindhu (Indus), Ganga and Brahmaputra. Brahmaputra is considered a brother.  600 million people depend and live in the cradles of these mighty rivers.

There is a Hindi film by name “Yaatrik”, produced in the year 1952 and directed by Kartick Chatterjee.  It is the story of a group of people on a trek in the Himalayas during their pilgrimage. The film brought considerable boost to the career of the well-known actor of yesteryear, Abhi Bhattacharya who has played the role of a young Bramhachari. There is a song in this film, sung by Pankaj Mullick who was at his peak as a play back singer then.  The recording is available and can be heard on YouTube.  The stanzas of the song are taken from the verses of Kalidasa’s Kumara Sambhavam.

When we hear that song and recall the words of the Mahakavi Kalidasa, there is no doubt that he is a Yardstick.  But he is not just a yardstick; he is a big yardstick indeed!     

Wednesday, December 7, 2011

LOTUS in a LOTUS

There are many stories about the well known Poet Kalidasa.  Many many stories which have been told and retold over generations.  Not only many stories, but also many variations of them.  Variations about the times of his life and works.  Variations about the many characters around him.  Variations about the places in which he was born and lived.  Almost everything about him is disputed with each advancing many versions of above details.  One wonders whether we would have had this much excitement if everything was codified and authenticated about him.   Many versions because everyone wants to claim that the poet belonged to their place and their surroundings.  Many versions because he has touched many aspects of life and described many places in his works.  The various disputes and versions have only rendered him even more attractive and closer to us.

One of the stories about Kalidasa is linked to a Lotus.   This story assumes that he was one of the nine gems in the court of King Vikramaditya.  Some say Bhojaraja.  Again two version and disputes.  The list of nine gems is given in this verse:

धन्वन्तरिक्षपणिक अमरसिंह शङ्कुः बेताल भट्ट घटकर्पर कालिदासः |
ख़्ह्यतोवराहमिहिरः नृपतेःसभायां  रत्नानिवैवररुचिर्नव विक्रमस्य ||

Dhanvantari, Kshapanika, Amarasimha, Shanku, Vetala Bhatta (Betala Bhatta), Ghatakarpara, Kalidasa, Varahamihira and  Vararuchi were the nine gems in the Court of King Vikrama. Or Bhoja, if you want to say that Vikrama was one other name or title for Bhoja.

The story goes that the other poets or some of them became very jealous of Kalidasa because the King valued him more that any of them and considered him as his personal friend.   They some how hatched a plot to see that the King becomes unhappy with Kalidasa and banishes him from his empire.  Another version says that the King wanted Kalidasa to recite King's epitaph when he is alive, as otherwise the King would not be able to hear it!   Unwilling to do this Kalidasa hid himself for sometime.   Another version says he was sent to Ceylone (SriLanka) on the invitation of King Kumarapala there, as an ambassador.   Whatever the reason, Kalidasa is sent away or gone away for sometime.

Then enters Dindima (डिंडिम),  another poet said to carry the blessings of Lord Shiva and has obtained the Lord's Damaru ( a hand held drum- Dindima also means this instrument) and capable of defeating all other poets in debate.  Having come to know that Kalidasa is not presently available in the King's court, he arrives at the King's court and presents a riddle to the King and his poets.  The riddle is like this:

कमले कमलोत्पत्तिः श्रूयते न तु दृश्यते  
(Kamale Kamlotpattihi shruyate na tu drushyate)
It is said that a Lotus is born in another Lotus.  This is only an imaginary thing but not to be seen anywhere.

None of the other poets or the Courtiers are able to solve the riddle.  Dindima gives a week's time for solving the riddle and leaves with a promise to arrive after a week to hear the solution to the riddle.  Upset with the inability of other poets to solve the riddle, the King offers a prize of half of his kingdom (!) to anyone who solves the riddle before Dindima returns.

The Court Dancer gets a banner prepared describing the riddle and gets it tied prominently at her home thinking that looking at it frequently would inspire her to solve the same and get the prize.  Kalidasa comes to  her house by chance and sees this banner.  He immediately takes the face of the dancer in his hands and says:

बाले तव मुखांबोजे कथं इन्दीवरद्वयम्?  Balee tava mukhamboje katham indeevaradwayam?
How is it there are two lotuses in your lotus face?


Taken together the riddle and answer read:
 कमले कमलोत्पत्तिः श्रूयते न तु दृश्यते | बाले तव मुखांबोजे कथं इन्दीवरद्वयम्? ||
It is said that a Lotus is born in another Lotus.  People say they have not seen it.  What is special about one Lotus being born in another Lotus?  Right now I am able to see Two Lotus (eyes) in one Lotus (face), forget about one in one, it is even two in one!

The story goes on to say that the dancer hid Kalidasa in her house (some say she even killed) and claimed the prize in the King's court by solving the riddle in the presence of Dindima.  Dindima was not the one to be fooled.   He tells the King that such a wonderful solution can be given by only one person on the earth - Poet Kalidasa himself.  There are many further versions of the story.  The King threatens the Dancer who discloses the place in which Kalidasa was kept hiding.   Kalidasa comes out of hiding.  King, Kalidasa, Dindima and other poets become friends and everything is fine thereafter.

The beauty of the story is in solving the riddle.  The seemingly impossible riddle is solved effortlessly and with a higher degree of ecstasy.  That is why they say "A poet can see things not seen even by the Sun".   Kalidasa is immortal through his works as well as such stories.

******

The photo on the left is of the Lotus (Nelumbo Nucifera) flower.  The one on the right is Water Lily (Nymphaea).  The difference is in the arrangement of circular pod as can be seen from the center of the flower. Structure of lotus seed pod is not available in Water lily.  (These pictures are taken from Wikipedia.)