Showing posts with label aagami. Show all posts
Showing posts with label aagami. Show all posts

Sunday, June 22, 2025

ಅಷ್ಟ ಭಾಗ್ಯಗಳು


ನಮ್ಮ ಆಚರಣೆಗಳಲ್ಲಿ ದೇವರು-ದೇವತೆಗಳನ್ನು ಪ್ರಾರ್ಥಿಸುವಾಗ "ಸಕಲ ಭೋಗ-ಭಾಗ್ಯ ಸಿಧ್ಯರ್ಥಂ" ಎಂದು ಸಂಕಲ್ಪಿಸಿ ಬೇಡುವುದು ಬಹಳ ಹಿಂದಿನಿಂದ ಬಂದ ಒಂದು ಕ್ರಮ. ಅನೇಕ ವೇಳೆ ಅಭಿವಾದನ ಮಾಡಿದ ಕಿರಿಯರಿಗೆ ಗುರು-ಹಿರಿಯರು ಆಶೀರ್ವಾದ ನೀಡುವಾಗ "ಸಕಲ ಭೋಗ-ಭಾಗ್ಯ ಸಿದ್ಧಿರಸ್ತು" ಎಂದು ಹೇಳುವುದೂ ಹೀಗೆಯೇ ನಡೆದು ಬಂದಿದೆ. 

ಸಾಮಾನ್ಯವಾಗಿ "ಅಷ್ಟ ಭೋಗಗಳು" ಮತ್ತು "ಅಷ್ಟ ಭಾಗ್ಯಗಳು" ಎಂಬುದಾಗಿ ವ್ಯವಹರಿಸುವುದು ವಾಡಿಕೆ. ಈ ಭೋಗಗಳು ಮತ್ತು ಭಾಗ್ಯಗಳು ಯಾವುವು? ಹೀಗೆಂದು ಮಿತ್ರರೊಬ್ಬರು ಕೇಳಿದ್ದರು. 

ಹಿಂದಿನ "ಅಷ್ಟ ಭೋಗಗಳು" ಎಂಬ ಶೀರ್ಷಿಕೆಯ ಸಂಚಿಕೆಯಲ್ಲಿ  ಭೋಗಗಳ ಬಗ್ಗೆ ಚರ್ಚೆ ಮಾಡಿದ್ದೆವು. (ಈ ಸಂಚಿಕೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ). 

ಈ ಸಂಚಿಕೆಯಲ್ಲಿ ಎಂಟು ಭಾಗ್ಯಗಳ ಬಗ್ಗೆ ಚರ್ಚೆ ಮಾಡೋಣ. 

*****

ಈಗ್ಗೆ ಸುಮಾರು ಅರವತ್ತು ವರುಷಗಳ ಹಿಂದಿನ ಸಮಯ. ಆಗ ನಾನು ಹೈಸ್ಕೂಲ್ ಸೇರಿ ಹತ್ತನೆಯ ತರಗತಿಯಲ್ಲಿ ಓದುತ್ತಿದ್ದೆ. ನಮ್ಮ ಊರಿನಲ್ಲಿ ಸುಬ್ಬರಾಯರು ಎಂಬ ಹೆಸರಿನ ನಿವೃತ್ತ ಉಪಾಧ್ಯಾಯರು ವಾಸವಾಗಿದ್ದರು. ನಮ್ಮ ಮನೆಯ ಬೀದಿಯಲ್ಲಿಯೇ ಅವರ ಮನೆ. ಅವರ ಕುಟುಂಬದ ಸದಸ್ಯರೆಲ್ಲ ಮೈಸೂರಿನಲ್ಲಿದ್ದರು. ಇವರಿಗೂ ಅಲ್ಲಿಗೆ ಬಂದಿರಲು ಮನೆಮಂದಿಯ ಒತ್ತಡವಿತ್ತು. ಆದರೆ ಅವರಿಗೆ ನಮ್ಮ ಊರಿನಲ್ಲಿ ಸ್ವಂತ ಮನೆ, ಮನೆಯ ಸುತ್ತ ದೊಡ್ಡ ತೋಟ, ಮತ್ತು ಸ್ವಲ್ಪ ಜಮೀನು ಇದ್ದವು. ಇವುಗಳನ್ನು ಬಿಟ್ಟು ಹೋಗಲು ಅವರಿಗೆ ಮನಸ್ಸಿಲ್ಲ, ಆದ್ದರಿಂದ ಒಬ್ಬರೇ ಇಲ್ಲಿ ವಾಸವಾಗಿದ್ದರು. ಬಹಳ ಚಟುವಟಿಕೆಯ ವ್ಯಕ್ತಿ. ಬಾಯಿತುಂಬಾ ಮಾತು. ವಿನೋದದ ಸ್ವಭಾವ. ಜನಪ್ರಿಯರು. 

ಊರು ದೊಡ್ಡದಾಗಿ ಬೆಳೆಯುತ್ತಿದ್ದಂತೆ ಅವರು ಮನೆಯ ಸುತ್ತವಿದ್ದ ತೋಟವನ್ನು ಮನೆ ಕಟ್ಟುವ ನಿವೇಶನಗಳಾಗಿ ಪರಿವರ್ತಿಸಿ, ಒಂದೊಂದಾಗಿ ಮಾರಲು ತೊಡಗಿದ್ದರು. ಎಲ್ಲಾ ಮಾರಿ ಮುಗಿದಮೇಲೆ ಮೈಸೂರಿಗೆ ಹೋಗಿ ಕುಟುಂಬದವರ ಜೊತೆ ಇರಬೇಕೆಂಬುದು ಅವರ ಇರಾದೆ. ಈ ಕೆಲಸಕ್ಕೆ ನಮ್ಮ ತಂದೆಯವರ ಸಹಾಯ ಪಡೆಯುತ್ತಿದ್ದರು. ಮೊದಲಿಗೆ ಜಮೀನು ಅಳತೆ ಮಾಡಿ ಸೈಟುಗಳು ಮಾಡಿದರು. ನಂತರ ಒಂದೊಂದಾಗಿ ಸುತ್ತಮುತ್ತಲಿದ್ದವರಿಗೆ ಮಾರಾಟದ ವ್ಯವಹಾರ. ಮಾರಾಟಕ್ಕೆ ಕ್ರಯಪತ್ರಗಳನ್ನು ಬರೆದು ಕೊಡಲು ನಮ್ಮ ತಂದೆಯವರ ಬಳಿ ಬರುತ್ತಿದ್ದರು. 

ಈಗ ಎಲ್ಲವೂ ಕಂಪ್ಯೂಟರ್ ಮಯವಾಗಿದೆ. ಆಗ ಕ್ರಯಪತ್ರ, ಭೋಗ್ಯಪತ್ರ ಮುಂತಾದುವನ್ನು ಛಾಪಾಕಾಗದದ ಮೇಲೆ (ಸ್ಟ್ಯಾಂಪ್ ಪೇಪರ್) ಕೈಬರಹದಲ್ಲಿ ಬರೆದು, ಕೊಳ್ಳುವವರು ಮತ್ತು ಮಾರುವವರು ಸಾಕ್ಷಿಗಳ ಸಮ್ಮುಖ ಸಹಿ ಮಾಡಿ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ರಿಜಿಸ್ಟರ್ ಮಾಡಿ ಕೊಡುತ್ತಿದ್ದರು. ಈ ರೀತಿ ಪತ್ರಗಳನ್ನು ಬರೆದು ಕೊಡುವವರಿಗೆ "ಬಿಕ್ಕಲಂ" ಎನ್ನುತ್ತಿದ್ದರು. ಪತ್ರದ ಕೊನೆಯಲ್ಲಿ "ಬಿಕ್ಕಲಂ" ಎಂದು ಬರೆದವರ ಹೆಸರು ನಮೂದಿಸಿ ಸಹಿ ಮಾಡುತ್ತಿದ್ದರು. ಇಂತಹವರು ಕಚೇರಿಗಳ ಮುಂದೆ ಒಂದು ಹಳೆಯ ಮೇಜು, ಕುರ್ಚಿಗಳನ್ನು ಇಟ್ಟುಕೊಂಡು ಕುಳಿತಿರುತ್ತಿದ್ದರು. ಪ್ರತಿ ಪತ್ರಕ್ಕೂ ಬರೆದವರಿಗೆ ಸ್ವಲ್ಪ ಸಂಭಾವನೆ ಸಿಗುತ್ತಿತ್ತು. ಹೀಗೆ ಬಂದ ಹಣದಿಂದ ಅವರು ಜೀವನ ನಡೆಸುತ್ತಿದ್ದರು. ಸುಬ್ಬರಾಯರಿಗೆ ಅವರ ಬಳಿ ಹೋಗಿ ಕಾಯಲು ಇಷ್ಟವಿರಲಿಲ್ಲ. ಆದ್ದರಿಂದ ನಮ್ಮ ತಂದೆಯವರ ಬಳಿ ಬಂದು ಪತ್ರಗಳನ್ನು ಬರೆಸುತ್ತಿದ್ದರು. 

*****

ಒಂದು ಭಾನುವಾರ ಬೆಳಿಗ್ಗೆ ಸುಬ್ಬರಾಯರು ನಮ್ಮ ಮನೆಗೆ ಬಂದರು. ಬಾಗಿಲಬಳಿ ನನ್ನನ್ನು ಕಂಡರು. 

"ಅಪ್ಪನನ್ನು ಕರಿ. ಸ್ವಲ್ಪ ಕೆಲಸ ಇತ್ತು"
"ಅಪ್ಪ ಊರಲ್ಲಿಲ್ಲ. ಬೆಂಗಳೂರಿಗೆ ಹೋಗಿದ್ದಾರೆ"
"ಯಾವಾಗ ಬರುವುದು?"
"ಮೂರು ನಾಲ್ಕು ದಿನಗಳಾಗಬಹುದು"

ಸುಬ್ಬರಾಯರು ಹಿಂದಿರುಗಿ ಹೊರಟರು. ಹತ್ತು ಹೆಜ್ಜೆ ಹೋಗಿದ್ದವರು ಮತ್ತೆ ಹಿಂದಿರುಗಿ ಬಂದರು. 

"ನಿನಗೆ ಚೆನ್ನಾಗಿ ಕನ್ನಡ ಬರೆಯಲು ಬರುತ್ತದಲ್ಲವೇ?"
"ಸುಮಾರಾಗಿ ಬರೆಯುತ್ತೇನೆ"
"ನನಗೆ ಗೊತ್ತು. ನಿನ್ನ ಬರವಣಿಗೆಯೂ ನಿಮ್ಮಪ್ಪನ ಬರಹದಂತೆ ಚೆನ್ನಾಗಿದೆ"
"......." 
"ಒಂದು ಕ್ರಯಪತ್ರ ಬರೆಯಬೇಕಿತ್ತು. ನೀನೇ ಬರೆದುಕೊಡು"
"ನನಗೆ ಅಷ್ಟೆಲ್ಲಾ ಬರುವುದಿಲ್ಲ. ತಪ್ಪಾದರೆ ಛಾಪಾಕಾಗದ ಹಾಳಾಗುತ್ತೆ. ತಂದೆಯವರಿಗೂ ಕೋಪ ಬರುತ್ತೆ"
"ಪರವಾಗಿಲ್ಲ. ನಾನು ನಿಧಾನವಾಗಿ ಹೇಳುತ್ತೇನೆ. ನೀನು ಬರೆಯುತ್ತಾ ಹೋಗು"
"..........."
"ಅಪ್ಪನಿಗೆ ನಾನು ಹೇಳುತ್ತೇನೆ. ನನ್ನ ಜವಾಬ್ದಾರಿ. ತಪ್ಪಾದರೆ ಕಾಟು ಹೊಡೆದು ಬರೆಯಬಹುದು.  ಒಂದು ಮಾದರಿ ಪತ್ರ ತಂದಿರುತ್ತೇನೆ. ನೋಡಿಕೊಂಡು ಬರಿ. ಆ ಸೀನಪ್ಪನ ಹತ್ತಿರ ಕಾದು ಕುಳಿತುಕೊಳ್ಳಬೇಕು. ಅದು ನನಗೆ ಆಗದು. ನೀನೇ ಬರೆದುಕೊಡು"

ಸ್ವಲ್ಪ ಸಮಯದ ನಂತರ ಮತ್ತೆ ಬಂದು ಬಲವಂತವಾಗಿ ಕೂಡಿಸಿಕೊಂಡು ಬರೆಸಿದರು. ಉತ್ಸಾಹದಲ್ಲಿ ನಾನೂ ಕ್ರಯ ಪತ್ರ ಬರೆದೆ. 
*****

ಪತ್ರ ಬರೆದ ದಿನಾಂಕ, ಸ್ವತ್ತು ಕೊಳ್ಳುವವರು ಮತ್ತು ಮಾರುವವರ ವಿವರಗಳನ್ನು ಬರೆದ ನಂತರ ಸ್ವತ್ತಿನ ಸ್ವಲ್ಪ ವಿವರ ಬರೆದು (ಪೂರ್ತಿ ವಿವರ ಚಕ್ಕುಬಂದಿ (ಬೌಂಡರಿ) ಸಮೇತ ಷೆಡ್ಯೂಲಿನಲ್ಲಿ ಬರೆದಿರುತ್ತೆ) ನಂತರದ ಒಕ್ಕಣೆ ಹೀಗಿತ್ತು:

"......... ಈ ಸ್ವತ್ತನ್ನು ಈ ದಿನ ಗವರ್ನಮೆಂಟು ಹತ್ತು ಸಾವಿರ ರೂಪಾಯಿಗಳಿಗೆ ಶುದ್ಧ ಕ್ರಯ ಮಾಡಿಕೊಟ್ಟಿರುತ್ತೇನೆ. ಈ ಸ್ವತ್ತಿಗೆ ಯಾವುದೇ ಕ್ರಯ, ಭೋಗ್ಯ, ಆಧಾರ, ಜೀವನಾಂಶ, ಭಾಗಾಂಶ, ಲಾಭಾಂಶ, ಮೈನರು ಹಕ್ಕುಗಳು ಮುಂತಾದ ಬಾಧ್ಯತೆಗಳಿರುವುದಿಲ್ಲ. ಮುಂದೆ ಎಂದಾದರೂ ಈ ರೀತಿ ತೊಂದರೆಗಳು ಕಂಡುಬಂದರೆ ನನ್ನ ಸ್ವಂತ ಖರ್ಚಿನಿಂದ ಪರಿಹರಿಸಿಕೊಡುವುದು ನನ್ನ ಜವಾಬ್ದಾರಿ. 

ಈ ಸ್ವತ್ತನ್ನು ಇಂದೇ ನಿಮ್ಮ ಸುಪರ್ದಿಗೆ ಬಿಟ್ಟುಕೊಟ್ಟಿರುತ್ತೇನೆ. ಇಂದಿನಿಂದ ಈ ಸ್ವತ್ತನ್ನು ಮತ್ತು ಅದರಲ್ಲಿ ಇರುವ ಮತ್ತು ಕಂಡುಬರುವ ಜಲ, ತರು, ಅಕ್ಷೀಣ, ಪಾಷಾಣ, ನಿಧಿ, ನಿಕ್ಷೇಪ, ಮುಂತಾದ ಅಷ್ಟ ಭಾಗ್ಯಗಳಿಗೂ ನೀವೇ ವಾರಸುದಾರರಾಗಿ ನಿಮ್ಮ ವಂಶ ಪಾರಂಪರ್ಯವಾಗಿ ಸುಖದಿಂದ ಅನುಭವಿಸಿಕೊಂಡು ಬರತಕ್ಕದ್ದು. ........."

ತಪ್ಪಿಲ್ಲದೆ, ಬಹಳ ಜಾಗರೂಕನಾಗಿ, ಮೈಯೆಲ್ಲಾ ಕಣ್ಣಾಗಿ ಪತ್ರ ಬರೆಯುವುದು ಮುಗಿಯಿತು. 

*****

ಪತ್ರ ಪೂರ್ತಿ ಬರೆದನಂತರ "ಮೇಷ್ಟ್ರೇ, ಈ ಅಷ್ಟಭಾಗ್ಯಗಳು ಅಂದರೇನು?' ಎಂದು ಕೇಳಿದೆ. ಸುಬ್ಬರಾಯ ಮೇಷ್ಟ್ರು ವಿವರಿಸಿದರು. 
 
ಜಲ, ತರು, ಅಕ್ಷೀಣ, ಪಾಷಾಣ, ನಿಧಿ, ನಿಕ್ಷೇಪ, ಸಂಚಿತ ಮತ್ತು ಆಗಮಿ ಎನ್ನುವ ಎಂಟು ರೀತಿಯ ಸಂಪತ್ತುಗಳು ಸ್ಥಿರ ಸ್ವತ್ತುಗಳಲ್ಲಿ (ಇಮ್ಮೂವಬಲ್ ಪ್ರಾಪರ್ಟಿ) ಸೇರಿರುತ್ತವೆ.
  1. "ಜಲ" ಅಂದರೆ ನೀರು ಮತ್ತು ಅದರ ಮೂಲಗಳಾದ ಬಾವಿ, ಕುಂಟೆ (ಸಣ್ಣ ಕೆರೆ), ಕೆರೆ, ಸರೋವರ ಮುಂತಾದುವುಗಳು. ಕೆಲವು ದೊಡ್ಡ ಸ್ವತ್ತುಗಳಲ್ಲಿ (ನೂರಾರು ಎಕರೆ ಹರಡಿರುವ  ಪ್ರದೇಶಗಳು) ಸಣ್ಣ ತೊರೆ ಅಥವಾ ನದಿಗಳೂ ಇರಬಹುದು. ಇದರಲ್ಲಿ ನೆಲದ ಮೇಲೆ ಕಾಣಿಸದಿದ್ದು ಬೋರ್ವೆಲ್ ಮುಂತಾದುವು ಕೊರೆದಾಗ ಸಿಗುವ ಅಂತರ್ಜಲವೂ ಸೇರುತ್ತದೆ. ಜಲದ ಜೊತೆಯಲ್ಲಿ  ಇವುಗಳಲ್ಲಿರುವ ಜಲಚರಗಳೂ (ಮೀನು ಮುಂತಾದುವು) ಕೂಡಿರುತ್ತವೆ. 
  2. "ತರು" ಅಂದರೆ ಮರ ಅಥವಾ ಮರ-ಗಿಡಗಳು. ಮರಗಳಲ್ಲಿ ಪ್ರತಿವರುಷ ಬಿಡುವ ಹೂವು-ಹಣ್ಣುಗಳು, ಎಲೆ ಮುಂತಾದುವು ಸೇರಿದವು. ಮರಗಳನ್ನು ಕತ್ತರಿಸಿದರೆ ಅದರಲ್ಲಿ ಬರುವ ಮರದ ದಿಮ್ಮಿಗಳು, ಸೌದೆ ಮುಂತಾದುವು ಕೂಡ ಒಳಗೊಂಡಿರುತ್ತವೆ. ಮರದಲ್ಲಿ ಜೇನುಗೂಡಿದ್ದರೆ ಅದೂ ಸಹ. 
  3. "ಅಕ್ಷೀಣ" ಅಂದರೆ ಕೊನೆಯಿಲ್ಲದ ಪದಾರ್ಥಗಳು. ಇಂಗ್ಲಿಷಿನಲ್ಲಿ ಪರ್ಮನೆಂಟ್ ಅಥವಾ ಎವೆರ್ಲಾಸ್ಟಿಂಗ್ ಅನ್ನುತ್ತಾರೆ. ತೆಗೆದರೆ ಅಥವಾ ಕತ್ತರಿಸಿದರೆ ಮತ್ತೆ ಬರುವ ಪದಾರ್ಥಗಳು ಇರಬಹುದು. (ಕೆಲವರು ಅಕ್ಷೀಣ ಅನ್ನುವ ಕಡೆ "ತೃಣ" ಎಂದು ಹೇಳುತ್ತಾರೆ. ತೃಣ ಅಂದರೆ ಹುಲ್ಲು ಮತ್ತು ಅದರಂತಹವು). 
  4. "ಪಾಷಾಣ" ಅಂದರೆ ಕಲ್ಲು. ಈಗಂತೂ ಕಲ್ಲಿನ ಗಣಿಗಳಿಗಾಗಿಯೇ ಭೂಮಿ ಕೊಳ್ಳುತ್ತಾರೆ. ಪಾಷಾಣ ಕ್ಷೀಣವಾಗುವ ಭಾಗ್ಯ. ಅಂದರೆ ಒಮ್ಮೆ ತೆಗೆದರೆ ಹೋಯಿತು. ಅಷ್ಟು ಕಮ್ಮಿ ಆಯಿತು. ಮೇಲೆ ಹೇಳಿದ ಅಕ್ಷೀಣ ಹಾಗಲ್ಲ. 
  5. "ನಿಧಿ" ಅಂದರೆ ಭೂಮಿಯಲ್ಲಿ ಹೂತಿಟ್ಟ ಹಣ. ಇಂಗ್ಲಿಷಿನಲ್ಲಿ "ಟ್ರೆಷರ್" ಅನ್ನುತ್ತಾರೆ. ಹಿಂದೆ ಭೂಮಿಯಲ್ಲಿ ಪಾತ್ರೆಗಳಲ್ಲಿ, ಕೊಪ್ಪರಿಗೆಗಳಲ್ಲಿ ಹಣ ಹೂತಿಡುತ್ತಿದ್ದರು. ಅಂತಹ ನಾಣ್ಯಗಳು ಅಥವಾ ಬೆಳ್ಳಿ-ಬಂಗಾರದ ಒಡವೆಗಳು ಸಿಕ್ಕರೆ ಅದು ನಿಧಿ.
  6. "ನಿಕ್ಷೇಪ" ಅನ್ನುವುದು ಭೂಮಿಯಲ್ಲಿ ಹುದುಗಿರುವ ಲೋಹದ ಅದಿರುಗಳು ಮುಂತಾದುವನ್ನು ಸೂಚಿಸುತ್ತದೆ. ಇಂಗ್ಲಿಷಿನಲ್ಲಿ "ಮೈನಿಂಗ್" ಮಾಡುವ ಪದಾರ್ಥಗಳು.  
  7. "ಸಂಚಿತ" ಅಂದರೆ ಹಿಂದಿನಿಂದ ಕೂಡಿಕೊಂಡು ಬಂದಿರುವ ಪದಾರ್ಥಗಳು. ಭೂಮಿಯಲ್ಲದೆ ಬೇರೆ ಪದಾರ್ಥ ಭೂಮಿಗೆ ಹೊಂದಿಕೊಂಡು ಬಂದಿರುವುದು. 
  8. "ಆಗಮಿ" ಅಂದರೆ ಮುಂದೆ ಬರುವ ಪದಾರ್ಥಗಳು. ಇದು ಈಗ ಇಲ್ಲ. ಮುಂದೆಂದೋ ಆ ಭೂಮಿಯಲ್ಲಿ ಉಂಟಾಗಬಹುದು. ಕೆಲವುಕಡೆ ಭೂಮಿಯ ಆಂತರಿಕ ಪರಿಣಾಮಗಳ, ಮಳೆ ಮುಂತಾದ ಕಾರಣ ಆಗುವ ಬದಲಾವಣೆಗಳು. ಭೂಗರ್ಭದಲ್ಲಿ ಆಗುವ ಒತ್ತಡಗಳಿಂದ ಚಿಮ್ಮಿ ಬರಬಹುದಾದ ಸಂಪತ್ತು. 
ಕೆಲವರು ಸಂಚಿತ ಮತ್ತು ಆಗಮಿ ಪದಗಳ ಬದಲು "ತೇಜ" ಮತ್ತು "ಸೌಮ್ಯ" ಎಂದು ಪ್ರಯೋಗಿಸುತ್ತಾರೆ. ಆಗ ಅಷ್ಟ ಭಾಗ್ಯಗಳು "ಜಲ, ತರು, ಅಕ್ಷೀಣ, ಪಾಷಾಣ, ನಿಧಿ, ನಿಕ್ಷೇಪ, ತೇಜ, ಸೌಮ್ಯ" ಎಂದಾಗುತ್ತದೆ.

ಒಟ್ಟಿನಲ್ಲಿ "ನಿಮಗೆ ಇದನ್ನು ಕೊಟ್ಟಿದ್ದೇನೆ. ಇದರಲ್ಲಿ ಇರಬಹುದಾದ, ಬೆಳೆಯಬಹುದಾದ, ಹುದುಗಿರಬಹುದಾದ, ಹಿಂದಿನಿಂದ ಬಂದಿರಬಹುದಾದ, ಮುಂದೆ ಬರಬಹುದಾದ, ಎಲ್ಲ ರೀತಿಯ ಸಂಪತ್ತುಗಳೂ ನಿಮಗೆ ಸೇರಿದ್ದು. ಮುಂದೆ ಕಂಡು ಬಂತು ಅಂದು ಅದರಮೇಲೆ ನಾನು ಹಕ್ಕು ಸ್ಥಾಪಿಸುವುದಿಲ್ಲ" ಎಂದು ಹೇಳುವ ರೀತಿ ಈ ಒಕ್ಕಣೆಗಳು.  

*****

ಮೂರು ದಿನಗಳ ನಂತರ ತಂದೆಯವರು ಊರಿಗೆ ಬಂದಿದ್ದರು. ಸುಬ್ಬರಾಯರು ಅವರನ್ನು ಕಾಣಲು ಬಂದರು. ನಾನೂ ಮನೆಯಲ್ಲಿದ್ದೆ. ಸಂಭಾಷಣೆ ಹೀಗಿತ್ತು:

"ಏನು, ನೀವು ಹೇಳದೇ ಕೇಳದೇ ಪರಊರಿಗೆ ಹೋಗುವುದು? ಇದರಿಂದ ನಿಮಗೇ ನಷ್ಟ. ಸೀನಪ್ಪ, ನೀವು ಇಬ್ಬರನ್ನೂ ಬಿಟ್ಟು ಇಲ್ಲಿ ಮೂರನೆಯವನೊಬ್ಬ ಬಿಕ್ಕಲಂ ಹುಟ್ಟಿಕೊಂಡಿದ್ದಾನೆ. ಇನ್ನು ಮುಂದೆ ಅವನಿಗೇ ಚೆನ್ನಾಗಿ ಸಂಪಾದನೆ ಆಗುತ್ತದೆ"
"ಯಾರು ಸ್ವಾಮಿ, ಅವನು?"
"ಇವನೇ, ನಿಮ್ಮ ಕುಮಾರ ಕಂಠೀರವ. ಬಹಳ ತುರ್ತಿತ್ತು. ಒಂದು ಕ್ರಯ ಪತ್ರ ಬರೆಸಿದೆ. ಚೆನ್ನಾಗಿ ಬರೆದಿದ್ದಾನೆ. ಆದರೆ ತುಂಬಾ ಪ್ರಶ್ನೆ ಕೇಳುತ್ತಾನೆ"

ಇಬ್ಬರೂ ನಕ್ಕರು. ಅವರ ಬೇರೆ ವಿಷಯದ ಸಂಭಾಷಣೆ ಮುಂದುವರೆಯಿತು. ನಾನು ಶಾಲೆಗೆ ಹೊರಟೆ. 

Saturday, February 6, 2016

Three Crops and Three Arrows


A farmer is continuously engaged in raising crops in his fields. He has raised many crops in the past. He has planted a crop in his fields right now. He is also planning to sow crops in the future. Therefore, at any point in time, he has yields of three types of crops. Those already harvested, that which is ready for harvesting and those that are to be planted and harvested in the coming days.

What is the position of the harvested returns for his efforts? His house has a granary that contains the harvested grains of the crops raised in the past. There is also a standing crop ripe and ready for harvesting in the fields in the current season. He is also preparing for sowing more crops in the future.

What about an Archer? He has a quiver on his back which is full of arrows. He has an arrow that is placed on the bow and ready to be released. There is an arrow that was just released but has not yet reached the destination. The arrow that has been released from the bow and in motion now cannot be called back. It is beyond his control now. It will do its duty and reach its destination. Like the farmer mentioned above, he has three arrows at any time. The arrow which is released from the bow, the one that is ready for releasing and those in the quiver awaiting their turn.

*****  

The examples of the farmer and the archer are extensively used to explain the "Karma" theory. They (Karma) are primarily classified into three categories; Sanchita, Agami and Prarabdha. We often hear people say that they are living out their "Prarabdha". What does it mean?

Even as per accepted laws of Physics, every action has an equal reaction. Whether one desires or not, actions produce their results. There cannot be an action without a reaction or result. For any living being, actions are a continuous process. Even not doing anything and keeping idle is also an action and produce its own reaction. It is the action of inaction! Planting and watering a fruit bearing tree sapling will lead to its growth and will ultimately yield fruits. Planting a noxious weed would also result in returns of a number of noxious seeds. This is in accordance with the means and ends relationship. One who plants a noxious weed cannot ever hope to get a fruit in return. Similarly, planting and watering a fruit bearing sapling cannot result in giving back noxious weeds.

Actions produce the corresponding results irrespective of whether they were done knowing their nature or one is not aware of them. Drinking poison kills the person who knows its harmful effect and drank it for committing suicide. Drinking poison also kills a person who consumes it without knowing that it is poison. Fire burns the hands of an elder person who is aware of its burning nature. It also burns the hands of a child which touches it being attracted by the color of the flames, but not aware of its burning nature. Karmic actions bring their results in a similar manner. 

Sanchita Karma are accumulated karma of past lives. They represent  desires, aptitudes, tendencies and capabilities carried over from past lives. They are naturally cumulative result of many past actions. Banks have "Sanchita Deposit Schemes" where deposits are made in installments and their returns are given with interest on a future due date. Agami Karma are those that represent expected future karma. Prarabdha Karma are those which are ripe for reaping and cannot be avoided. One has to live them out and face their effects without fail. 

The crop ready for harvesting now and the arrow released from the bow and in motion are symbols of Prarabdha. One has no control over them now, even though their origin was due to one's own actions. The grain bags in the granary and arrows in the quiver represent the Sanchita karma. The crops to be sown in future and the arrow in the bow right now are symbols of Agami karma.

One has to remember that all Prarabdha is not necessarily bad. There are many "Sukha Prarabdha Karmas" as well. They are the results of the past good actions and bring good results.
*****

A grand function has been planned to celebrate a major landmark in the family. Many rituals are to be conducted as a part of the celebration. Ghee is an important ingredient to be used in the rituals. The lead conductor of the rituals has given a list of items including ghee. About two hundred guests are expected and a grand lunch will be the crowning glory of the function. Chief cook has given his own list of items including ghee. Aggregated requirements of items are to be purchased from the grocery shop.

The aggregate order for ghee is 50 Kg. It is available in 5 Kg containers and 10 containers are to be bought. There is a doubt whether this much is really required as the tendency is to indent for higher quantities as nobody wants shortage in the middle of the function. Shopkeeper provides the solution. Take ten containers now and the surplus if any will be taken back, he assures. 

After the function it is observed that six containers of ghee is fully used and two are not opened at all. But there are two opened containers with large quantities of ghee in them. They are taken to the shop. Shopkeeper accepts the two full containers as it can be sold to someone else. But open containers are not acceptable. They are now the exclusive property of the holder. 

Prarabdha Karma is similar to the ghee in the opened containers or grains in an opened bag. The holder only has to use it. Whether one likes it or not, it is to be borne by him. High cholesterol and medical prescription cannot dispose it! 

Is there no escape at all? Can the pain be reduced? Go to the nearest temple and use the surplus ghee in these two open containers to light the lamps there. Many believe that surrendering to a Sadguru or the Lord will reduce the impact of Prarabdha Karma this way.

*****

How to escape the effect of these Karmas? There is a big haystack on our back and we are moving around carrying this burden. Can the burden be lightened? Some say that they cannot be avoided and their fruits have to be lived through. A tiny spark is enough to burn it down. Many believe that the protection of a "Sadguru" helps in reducing their effects. Believing in the Lord and doing one's duty dispassionately helps in reducing the impact of the various bad karmas. Probably the best strategy would be not to enter into bad karmas willingly. Do not plant noxious weeds. There won't be any noxious harvests!

What about those who do not believe in the theory of Karma? What about those who do not believe in the existence of the "Sadguru" or the "Lord"? They are the gifted ones as they need not worry about Karma at all. They too cannot escape the effects of their actions, but they need not spend any time on worrying about it.