Showing posts with label devotion. Show all posts
Showing posts with label devotion. Show all posts

Friday, April 18, 2025

ಎಂಜಲು ಮತ್ತು ಪ್ರಸಾದ


ಹಿಂದಿನ ಸಂಚಿಕೆಯಲ್ಲಿ "ಚರ್ವಿತ ಚರ್ವಣ" ಅನ್ನುವ ಶೀರ್ಷಿಕೆಯಡಿ "ಈ ಪ್ರಪಂಚದಲ್ಲಿರುವ ಸಾಹಿತ್ಯವೆಲ್ಲ  ವ್ಯಾಸರು ಹೇಳಿ ಬಿಟ್ಟದ್ದು" ಎನ್ನುವ ನಾಣ್ಣುಡಿ ನೆನಪಿಸಿಕೊಂಡೆವು. "ವ್ಯಾಸೋಚ್ಛಿಷ್ಟಮ್ ಜಗತ್ ಸರ್ವಂ" ಎನ್ನುವ ಈ ಹೇಳಿಕೆಯ ಹಿನ್ನೆಲೆಯಲ್ಲಿ, ಉಚ್ಚಿಷ್ಟ ಪದಕ್ಕೆ ಸಾಮಾನ್ಯವಾಗಿ "ತಿಂದು ಬಿಟ್ಟದ್ದು" ಅಥವಾ "ಎಂಜಲು" ಎಂದು ಅರ್ಥವಿದ್ದರೂ ಅದರಲ್ಲಿ ಏನಾದರೂ ವಿಶೇಷ ಅರ್ಥ ಇದೆಯೇ ಎಂಬ ಬಗ್ಗೆ ಪ್ರಶ್ನೆ ಹಾಕಿಕೊಂಡಿದ್ದೆವು. ಅದರ ಬಗ್ಗೆ ಈಗ ಸ್ವಲ್ಪ ಯೋಚಿಸೋಣ. ಇದರ ಹಿನ್ನೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. 

ಪರಮಾತ್ಮನ ಸೃಷ್ಟಿ ಕಾರ್ಯದಲ್ಲಿ, ಮೊದಲು ಅನ್ನವನ್ನು ಸೃಷ್ಟಿ ಮಾಡಿ ನಂತರ ಜೀವಿಗಳನ್ನು ಸೃಷ್ಟಿ ಮಾಡಲಾಯಿತು ಎನ್ನುವುದನ್ನು "ಬೃಹದಾರಣ್ಯಕೋಪನಿಷತ್" ಕೃತಿಯ "ಸಪ್ತಾನ್ನ ಪ್ರಕರಣ" ವಿಭಾಗದಲ್ಲಿ ಅತ್ಯಂತ ವಿವರವಾಗಿ ಚರ್ಚಿಸಲಾಗಿದೆ. ಸಾವಿರಾರು ವರುಷಗಳ ಹಿಂದೆ ಇಂಥದೊಂದು ವಿಸ್ತಾರವಾದ ಚರ್ಚೆ ನಮ್ಮಲ್ಲಿ ನಡೆದಿದೆ ಎನ್ನುವುದೇ ಒಂದು ವಿಸ್ಮಯದ ವಿಷಯ. ಇಲ್ಲಿ ಅನ್ನ ಅಂದರೆ ಭತ್ತದಿಂದ ತೆಗೆದ ಅಕ್ಕಿಯನ್ನು ಬೇಯಿಸಿ ಮಾಡಿದ ಪದಾರ್ಥ ಮಾತ್ರವಲ್ಲ. ಆಹಾರ ರೂಪದಲ್ಲಿ ಸಮಸ್ತ ಪ್ರಾಣಿಗಳೂ ಸೇವಿಸುವ ಪದಾರ್ಥಗಳನ್ನು ಒಟ್ಟಾಗಿ "ಅನ್ನ" ಎಂದು ಹೇಳಲಾಗಿದೆ. ಏಳು ರೀತಿಯ ಅನ್ನಗಳು, ಅವನ್ನು ಸೇವಿಸುವ ಗುಂಪುಗಳು ಮತ್ತು ಅವನ್ನು ನೀಡುವ ಪಾಲಕ (ಕಸ್ಟೋಡಿಯನ್) ಇವುಗಳನ್ನು ಒಂದು ಕೋಷ್ಠಕದ ರೀತಿ ವಿವರಿಸಲಾಗಿದೆ. ಇದರ ವಿವರ ನೋಡಲು ಇಲ್ಲಿ ಕ್ಲಿಕ್ ಮಾಡಿ. 

ಈ ಚರ್ಚೆಯ ಸಂದರ್ಭದಲ್ಲಿ ಎಂಜಲು, ಶೇಷಾನ್ನ, ಪಿತೃಶೇಷ, ಮಾತೃ ಭೋಜನ ಮತ್ತು ಪ್ರಸಾದ ಎನ್ನುವ ಬೇರೆ ಬೇರೆ ರೀತಿಯ ವರ್ಗೀಕರಣ ಮತ್ತು ಸಮಾಜದಲ್ಲಿ ನಡೆಯುವ ಪದ್ದತಿ ಹಾಗೂ ಸಂಪ್ರದಾಯಗಳನ್ನು ಕೂಡ ನೋಡಬಹುದು. 

*****

ಕೆಲವು ಪದಾರ್ಥಗಳನ್ನು ಒಬ್ಬ ವ್ಯಕ್ತಿಯೇ ತಿಂದು ಮುಗಿಸಬಹುದು. ಕೆಲವು ಪದಾರ್ಥಗಳು ಒಬ್ಬನೇ ವ್ಯಕ್ತಿಗೆ ಅನೇಕ ಸಂಖ್ಯೆಯಲ್ಲಿ ಬೇಕಾಗಬಹುದು. ಮತ್ತೆ ಕೆಲವು ಪದಾರ್ಥಗಳು ಒಬ್ಬರು ತಿಂದು ಮುಗಿಸುವುದಕ್ಕೆ ಅಸಾಧ್ಯವೇ. ಒಂದು ಬಾಳೆಯಹಣ್ಣು ಅಥವಾ ಒಂದು ಕಿತ್ತಳೆಯನ್ನು ಒಬ್ಬನೇ ತಿನ್ನಬಹುದು. ದ್ರಾಕ್ಷಿಯಾದರೆ ಒಬ್ಬನೇ ಹತ್ತಿಪ್ಪತ್ತು ತಿನ್ನಬಹುದು. ಒಂದು ದೊಡ್ಡ ಹಲಸಿನ ಹಣ್ಣಾದರೆ ಒಬ್ಬನೇ ತಿನ್ನಲು ಅಸಾಧ್ಯ. ಹಣ್ಣುಗಳದ್ದು ಒಂದು ಸರಳ ಉದಾಹರಣೆ. ಇದೇ ರೀತಿ ಹೆಚ್ಚಿನ ಪ್ರಮಾಣದಲ್ಲಿ ಮಾಡಿಟ್ಟ ಅನೇಕ ತಿನಿಸುಗಳಿಂದ ಕೂಡಿದ ಅಡಿಗೆ. ಇದನ್ನು ಅನೇಕರು ಒಟ್ಟಿಗೆ ಅಥವಾ ಬೇರೆ ಬೇರೆಯಾಗಿ ಸೇವಿಸಬಹುದು. 

ಇಂತಹ ಒಂದು ಅನೇಕ ವ್ಯಂಜನಗಳಿಂದ (ಪಲ್ಯ, ಗೊಜ್ಜು, ಕೂಟು, ಚಟ್ನಿ ಮುಂತಾದುವುಗಳಿಗೆ ವ್ಯಂಹಜನಗಳು ಎನ್ನುತ್ತಾರೆ) ಕೂಡಿದ ಹತ್ತಾರು ಜನ ಸೇವಿಸಬಹುದಾದ ಪ್ರಮಾಣದ ಅಡಿಗೆಯನ್ನು ತೆಗೆದುಕೊಳ್ಳೋಣ. ಇಪ್ಪತ್ತು ಜನರಿಗೆ ಎಂದು ಮಾಡಿದ ತಯಾರಿ ಅನ್ನೋಣ. ಹತ್ತು ಜನರು ಮೊದಲು ಊಟಕ್ಕೆ ಕುಳಿತರು. ಅಡಿಗೆ ಸೊಗಸಾಗಿತ್ತು. ಊಟದ ಮನೆಯ ವಾತಾವರಣ ಚೆನ್ನವಿತ್ತು. ಬಡಿಸುವವರು ನುರಿತವರು. ಊಟಕ್ಕೆ ಕುಳಿತವರೋ ಭೋಕ್ತಾಪುರುಷರು. (ಒಳ್ಳೆಯ ಪ್ರಮಾಣದಲ್ಲಿ ಪದಾರ್ಥಗಳನ್ನು ಚೆನ್ನಾಗಿ ಊಟ ಹೊಡೆಯುವವರನ್ನು ಭೋಕ್ತಾಪುರುಷರು ಎಂದು ಹೇಳುತ್ತಿದ್ದರು). ಬಹಳ ವಿನೋದ ಮತ್ತು ಸ್ವಲ್ಪ ಸಂಗೀತ ಇತ್ಯಾದಿಗಳ ನಡುವೆ ಊಟ ಚೆನ್ನಾಗಿ ಸಾಗಿತು. ಹತ್ತು ಜನರೂ ಊಟಮಾಡಿ ಎದ್ದಿದ್ದಾರೆ. 

ಮಾಡಿದ ಅಡಿಗೆಯಲ್ಲಿ ಅರ್ಧಕ್ಕಿಂತ ಸ್ವಲ್ಪ ಹೆಚ್ಚಾಗಿ ಖರ್ಚಾಗಿದೆ. ಅಂಕಿ-ಅಂಶಗಳ ಲೆಕ್ಕದಲ್ಲಿ ಹೇಳುವುದಾದರೆ ಶೇಕಡಾ ಅರವತ್ತರಷ್ಟು ಸೇವಿಸಿಯಾಗಿದೆ. ಮಿಕ್ಕ ನಲವತ್ತು ಭಾಗ ತಯಾರಿಸಿದ ಮತ್ತು ಬಡಿಸಿದ ಪಾತ್ರೆಗಳಲ್ಲಿ ಉಳಿದಿದೆ. ಹತ್ತು ಜನ ಊಟ ಮಾಡಿದವರ ಎಲೆಗಳಲ್ಲೂ ಸ್ವಲ್ಪ ಸ್ವಲ್ಪ ಪದಾರ್ಥಗಳು ಉಳಿದಿವೆ. ಈ ರೀತಿ ಊಟ ಮಾಡಿ ಬಿಟ್ಟ ಎಲೆಗಳಲ್ಲಿ ಅಥವಾ ತಟ್ಟೆಗಳಲ್ಲಿ ಬಿಟ್ಟಿರುವ ಪದಾರ್ಥಗಳನ್ನು "ಎಂಜಲು" ಎನ್ನುವುದು ವಾಡಿಕೆ. ಇದನ್ನು ಯಾರೂ ತಿನ್ನುವುದಿಲ್ಲ. ಅವೆಲ್ಲವನ್ನೂ ಒಟ್ಟುಗೂಡಿಸಿ ಹೊರಗಡೆ ಬಿಸಾಡುತ್ತಾರೆ. ಅಲ್ಲಿ ಪ್ರಾಣಿಗಳು ತಿನ್ನಬಹುದು ಇಲ್ಲವೇ ಕಡೆಗೆ ಗೊಬ್ಬರ ಆಗಬಹುದು. ಆದರೆ ತಯಾರಿಸಿದ ಮತ್ತು ಬಡಿಸುವ ಪಾತ್ರೆಗಳಲ್ಲಿ ಉಳಿದಿರುವ ಪದಾರ್ಥಗಳು ಎಂಜಲಲ್ಲ. ಅದನ್ನು ನಿರ್ದೇಶಿಸಲು ಬಳಸುವ ಪದ "ಮಿಕ್ಕಿದ್ದು" ಎಂದು. "ಶೇಷಾನ್ನ" ಎಂದು ಹಿಂದೆ ಹೇಳುತ್ತಿದ್ದರು. ಇದು ಎಂಜಲಲ್ಲ. ಬೇರೆಯವರು ಸೇವಿಸಲು ಯೋಗ್ಯವಾದದ್ದು. 

*****

ಶ್ರಾದ್ಧಾದಿ ಕರ್ಮಗಳನ್ನು (ತಿಥಿ ಎಂದು ಹೇಳುವುದು ವಾಡಿಕೆ) ಮಾಡುವ ದಿನ ಆ ಕೆಲಸಕ್ಕಾಗಿಯೇ ವಿಶೇಷ ಅಡಿಗೆ ಮಾಡಿರುತ್ತಾರೆ. ಆ ಕಾರ್ಯಕ್ರಮಕ್ಕೆ ಪಿತೃಗಳ ಪ್ರತಿನಿಧಿಗಳಾಗಿ ಕೆಲವರನ್ನು ಆಮಂತ್ರಿಸಿರುತ್ತಾರೆ. ಅವರನ್ನು ಊಟಕ್ಕೆ ಕೂಡಿಸಿ, ಅವರಲ್ಲಿ ಪಿತೃದೇವತೆಗಳನ್ನು ಆವಾಹಿಸಿ ಭೋಜನ ಮಾಡಿಸುತ್ತಾರೆ. ಅವರ ಊಟ ಮುಗಿದು, ಕೈ ತೊಳೆಯಲು ಏಳುವ ಮುಂಚೆ ಅಲ್ಲಿ ಮಾಡಿರುವ ಅನ್ನದಲ್ಲಿ "ಪಿಂಡದಾನ" ಮಾಡುತ್ತಾರೆ. (ಈ ಪಿಂಡಪ್ರದಾನ ಸಮಯದಲ್ಲೂ ಅಸ್ವಾಭಿಕ ಮರಣಹೊಂದಿದ ಪಿತೃಗಳಿಗೆ "ಉಚ್ಚಿಷ್ಟ ಪಿಂಡ" ಎಂದು ಬೇರೊಂದು ಪಿಂಡಪ್ರದಾನ ಮಾಡುತ್ತಾರೆ).  ಶ್ರಾದ್ಧ ಕರ್ಮಕ್ಕೆ ಬಂದವರ ಊಟ ಆಯಿತು. ಮಾಡಿದ ಅಡಿಗೆ ಇನ್ನೂ ಮಿಕ್ಕಿದೆ. ಇದು ಶೇಷಾನ್ನ. ಪಿತೃಕಾರ್ಯ ಮಾಡಿ ಉಳಿದ ಶೇಷಾನ್ನ ಆದುದರಿಂದ ಇದು "ಪಿತೃ ಶೇಷ" ಎಂದಾಯಿತು. 

ಕಾರ್ಯ ನಡೆಯುವಾಗ ಊಟ ಮಾಡಿದ ಹಿರಿಯರನ್ನು ಕಾರ್ಯ ಮಾಡಿದ ಯಜಮಾನ "ಮಿಕ್ಕ ಅಡಿಗೆಯನ್ನು ಏನು ಮಾಡೋಣ?" (ಶೇಷಾನ್ನ೦ ಕಿಂ ಕರಿಷ್ಯೇ?) ಎಂದು ಕೇಳುತ್ತಾನೆ. "ನಿನ್ನ ಬಂಧುಗಳೊಡನೆ ಸೇವಿಸಬಹುದು" (ಇಷ್ಟೆ:ಸಹ ಭುಂಜತಾಮ್) ಎಂದು ಅವರು ಹೇಳುತ್ತಾರೆ. (ಇದು ಸಂಸ್ಕೃತದಲ್ಲಿ ನಡೆಯುವ ಸಂಭಾಷಣೆಯಾದದ್ದರಿಂದ ಇದೂ ಒಂದು ಮಂತ್ರವೆಂದು ತಿಳಿಯುವುದೂ ಉಂಟು!). ಇದೇ ಪಿತೃಶೇಷ ಸೇವನೆ. ಶ್ರದ್ದಾಳು ಬಂಧುಗಳು "ಪಿತೃಗಳ ಪ್ರಸಾದವಿದು" ಎನ್ನುವ ಪೂಜ್ಯ ಭಾವನೆಯಿಂದ ಈ ವಿಶೇಷಕ್ಕಾಗಿ ದೂರ ದೂರದಿಂದ ಬರುತ್ತಾರೆ. ಬಂಧು-ಭಾಂಧವರಲ್ಲದವರು ಈ ಪದಾರ್ಥಗಳನ್ನು ಸೇವಿಸುವುದಿಲ್ಲ. 

*****

ತಾಯಿಗೂ ಮಕ್ಕಳಿಗೂ ಇನ್ನೆಲ್ಲಿಲ್ಲದ ವಿಶೇಷ ಸಂಬಂಧ. ಗರ್ಭದಲ್ಲಿದ್ದಾಗ ತಾಯಿ ಸೇವಿಸಿದ ಆಹಾರವನ್ನು ಹೊಕ್ಕುಳ ಬಳ್ಳಿಯ ಮೂಲಕ ಸೇವಿಸಿ, ಬೆಳೆದು ಹುಟ್ಟಿದ್ದಾಯಿತು. ಮನುಷ್ಯರಲ್ಲಿ ಹುಟ್ಟಿದ ಶಿಶು ದೊಡ್ಡದಾಗಲು ಕೆಲವು ವರುಷಗಳೇ ಆಗುತ್ತವೆ. ಮಗುವಿಗೆ ಎಲ್ಲ ಬೇಕು-ಬೇಡಗಳಿಗೂ ಅಮ್ಮನೇ ಬೇಕು. ಕಂಠದವರೆಗೂ ತಿಂದಿದ್ದರೂ ಅಮ್ಮ ಊಟಕ್ಕೆ ಕುಳಿತಾಗ ಅವಳ ತಟ್ಟೆಯಲ್ಲಿ ಅಥವಾ ಎಲೆಯಲ್ಲಿ ಇರುವ ಪದಾರ್ಥವೇ ಬೇಕು. ಇದು ಯಾವುದೂ ತರ್ಕಕ್ಕೆ ನಿಲುಕುವ ವಿಷಯವಲ್ಲ. ಅದನ್ನು ಅನುಭವವೇ ಅರ್ಥ ಮಾಡಿಸಬೇಕು. ತಾಯಿಯಿರುವ ಎಲ್ಲರೂ ಈ ರೀತಿ ಬೆಳೆದವರೇ. ಒಂದು ವಯಸ್ಸಿನವರೆಗೆ ಹೀಗೆಯೇ ನಡೆಯುತ್ತದೆ. 

"ಉಪನಯನ" ಅಥವಾ "ಮುಂಜಿ" ಎನ್ನುವ ಸಂಸ್ಕಾರ ಮಾಡುವ ಕುಟುಂಬಗಳಲ್ಲಿ ಮಂತ್ರೋಪದೇಶಕ್ಕೆ ಮೊದಲು "ಮಾತೃಭೋಜನ" ಎನ್ನುವ ಒಂದು ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಮುಂದೆ ಉಪನಯನ ಆದವನು ಮತ್ತೊಬ್ಬರ ಎಲೆಯಲ್ಲಿ ಇರುವ ಪದಾರ್ಥ ತಿನ್ನುವಂತಿಲ್ಲ. ಅವನು ಪ್ರತಿದಿನ ಮಾಡುವ ಭೋಜನವೂ ತನ್ನಲ್ಲಿರುವ ಪ್ರಾಣಾಗ್ನಿಗೆ ಕೊಡುವ ಆಹುತಿ. ಇದಕ್ಕಾಗಿಯೇ ತಾಯಿ-ಮಗನನ್ನು ಅಂದು ಮಂತ್ರೋಪದೇಶದ ಮುಂಚೆ ಒಟ್ಟಿಗೆ ಕೂಡಿಸಿ ಒಂದೇ ಎಲೆಯಲ್ಲಿ ಆಹಾರ ಬಡಿಸುತ್ತಾರೆ. ಇದೊಂದು ಭಾವನೆಗಳ ಕೇಂದ್ರಿತ ಕಾರ್ಯಕ್ರಮ. ಹಿಂದೆಲ್ಲ ಇದೊಂದು ಸಣ್ಣ ಖಾಸಗಿ ವಿಷಯವಾಗಿ ನಡೆಯುತ್ತಿತ್ತು. ಈಗ ಈವೆಂಟ್ ಮ್ಯಾನೇಜ್ಮೆಂಟ್ ನೇತೃತ್ವದಲ್ಲಿ ಬಹಳ ವೈಭವೋಪೇತವಾಗಿ ನಡೆಯುತ್ತದೆ. 

***** 

ಎಂಜಲು, ಶೇಷಾನ್ನ, ಪಿತೃಶೇಷ ಮತ್ತು ಮಾತೃಭೋಜನದ ಬಗ್ಗೆ ನೋಡಿದ್ದಾಯಿತು. ಇನ್ನು ಪ್ರಸಾದದ ಬಗ್ಗೆ ನೋಡೋಣ. 

ನಾವು ನಂಬಿದ ದೈವಕ್ಕೆ ಕೃತಜ್ಞತೆ ತೋರಿಸುವ ಸಲುವಾಗಿ ಪೂಜೆ-ಪುನಸ್ಕಾರಗಳನ್ನು ಮಾಡುವುದು ಬಹಳ ಹಿಂದಿನಿಂದ ಬಂದಿರುವ ಒಂದು ಸಂಪ್ರದಾಯ. ಈ ರೀತಿ ಮಾಡುವಾಗ ಭಯ-ಭಕ್ತಿಗಳಿಂದ ಇಷ್ಟದೈವಕ್ಕೆ ಕೊಡಲು ತಿಂಡಿ-ತಿನಿಸು, ಅಡಿಗೆ, ಪಾನೀಯ ಇತ್ಯಾದಿ ಮಾಡುವುದು. ಹಣ್ಣು-ಹಂಪಲುಗಳನ್ನು ಸೇರಿಸುವುದು. ತಯಾರು ಮಾಡಿದ ಮತ್ತು ಸಂಪಾದಿಸಿದ ಇಂತಹ ಪದಾರ್ಥಗನ್ನು ಆವಾಹಿಸಿದ ದೇವರು-ದೇವತೆಗಳ ಮುಂದೆ ಇಟ್ಟು "ಷೋಡಶೋಪಚಾರ" (ಹದಿನಾರು ಹಂತದ ಪೂಜೆ) ಅಂಗವಾಗಿ "ನೈವೇದ್ಯ" ಮಾಡುತ್ತಾರೆ. ಹೀಗೆ ಮಾಡುವಾಗ ಪರಮಾತ್ಮನು ಅಲ್ಲಿ ಇಟ್ಟ ಪದಾರ್ಥಗಳಲ್ಲಿ ತನಗೆ ಯೋಗ್ಯವಾದ ಅಂಶಗಳನ್ನು ರಸರೂಪವಾಗಿ ನೋಟದಿಂದ ಸೇವಿಸುತ್ತಾನೆ ಎಂದು ನಂಬಿಕೆ. ಹೀಗೆ ನೈವೇದ್ಯ ಮಾಡಿದ ಮೇಲೆ ಅಲ್ಲಿ ಉಳಿದ ಪದಾರ್ಥ "ಪ್ರಸಾದ" ಆಯಿತು. ಅನುಗ್ರಹ ರೂಪವಾಗಿ ನಮಗೆ ಹಿಂದೆ ಬಂದಿದ್ದು "ಪ್ರಸಾದ" ಎಂದು ನಿರ್ದೇಶಿತವಾಯಿತು. 

ದೇವರು ಸ್ವೀಕರಿಸಿ (ತಿಂದು) ಬಿಟ್ಟ ಇದನ್ನು ಯಾರೂ ದೇವರ ಎಂಜಲು ಎನ್ನುವುದಿಲ್ಲ. ಬಹಳ ಗೌರವಪೂರ್ವಕ "ಪ್ರಸಾದ" ಎನ್ನುತ್ತಾರೆ. ಯಾರಾದರೂ ಕೊಟ್ಟರೆ ಎರಡೂ ಕೈಗಳಿಂದ ಸ್ವೀಕರಿಸುತ್ತಾರೆ. ಮೊದಲು ನೋಡಿದ ಎಂಜಲು ಮತ್ತು ಈಗ ನೋಡಿದ ಪ್ರಸಾದಕ್ಕೆ ಎಷ್ಟು ವ್ಯತ್ಯಾಸ! ಅದರ ಬೆಲೆ ನಂಬಿಕೆ ಮತ್ತು ಶ್ರದ್ದೆಯಲ್ಲಿ ಇದೆ. ಭೌತಿಕವಾಗಿ ನೋಡಿದರೆ ವ್ಯತ್ಯಾಸವಿಲ್ಲ. ಭಾವನಾತ್ಮಕವಾಗಿ ನೋಡಿದರೆ ಎಲ್ಲಿಲ್ಲದ ವ್ಯತ್ಯಾಸ. 

ದೊಡ್ಡ ಸಮಾರಂಭಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಡಿಗೆ ಮಾಡಿದಾಗ ಪಾಕಶಾಲೆಯಲ್ಲಿಯೇ ನೈವೇದ್ಯ ಮಾಡುತ್ತಾರೆ. ಸಾಮೂಹಿಕ ಭೋಜನಶಾಲೆಗಳಿರುವ ದೇವಾಲಯಗಳಲ್ಲಿ ಇದನ್ನು ನೋಡಬಹುದು. ಮನೆಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ತಯಾರಿಸಿದ ಎಲ್ಲಾ ಪದಾರ್ಥಗಳನ್ನೂ ಒಂದು ಹರಿವಾಣದಲ್ಲಿ ಸ್ವಲ್ಪ ಸ್ವಲ್ಪ ಬಡಿಸಿ ನೈವೇದ್ಯ ಮಾಡುತ್ತಾರೆ. ನಂತರ ಅದನ್ನು ಅದೇ ಕ್ರಮದಲ್ಲಿ ಮಾಡಿರುವ ಹೆಚ್ಚಿನ ಅಡಿಗೆ ಪದಾರ್ಥಗಳಲ್ಲಿ ಸೇರಿಸುತ್ತಾರೆ. ಈಗ ಮಾಡಿದ ಅಡಿಗೆ ಎಲ್ಲ ಪ್ರಸಾದವಾಯಿತು!

ಅನೇಕ ದಶಕಗಳ ಹಿಂದೆ ಕಾಶಿ-ರಾಮೇಶ್ವರ ಯಾತ್ರೆ ಬಹಳ ಕಠಿಣದ್ದಾಗಿತ್ತು. ಹೀಗೆ ಯಾತ್ರೆ ಹೋದವರು ದಾರಿಯಲ್ಲಿ ಸಿಗುವ ಅನೇಕ ಕ್ಷೇತ್ರಗಳನ್ನು ಸಂದರ್ಶಿಸಿ ಅಲ್ಲಿಂದ ಪ್ರಸಾದ ತರುತ್ತಿದ್ದರು. ಸಾಮಾನ್ಯವಾಗಿ ಕಲ್ಲುಸಕ್ಕರೆ, ಒಣದ್ರಾಕ್ಷಿ, ಉತ್ತತ್ತಿ (ಖರ್ಜೂರ), ಪಂಚಕಜ್ಜಾಯ, ಕಲ್ಯಾಣಸೇವೆ ಮುಂತಾದ, ಬಹಳ ದಿನ ಕೆಡದೆ ಇರುವ ಪದಾರ್ಥಗಳ ಪ್ರಸಾದಗಳು. ತಿರುಪತಿಯಂತಹ ಕ್ಷೇತ್ರವಾದರೆ ಲಾಡುವೂ ಆಗಬಹುದು. ಯಾತ್ರೆ ಮುಗಿದು ಊರಿಗೆ ಬಂದ ನಂತರ ಒಂದು ದಿನ ಬಂಧು-ಮಿತ್ರರನ್ನೆಲ್ಲ ಕರೆದು ಸಮಾರಾಧನೆ ನಡೆಸುತ್ತಿದ್ದರು. "ಕಾಶಿ ಸಮಾರಾಧನೆ" ಅಥವಾ "ಗಂಗಾ ಸಮಾರಾಧನೆ" ಎಂದು ಅದಕ್ಕೆ ಹೆಸರು. ಇಷ್ಟದೇವತೆಯ ಜೊತೆಗೆ ಈ ಎಲ್ಲ ಕ್ಷೇತ್ರಗಳ ಪ್ರಸಾದಗಳನ್ನೂ ಪೂಜಿಸಿ ಬಂದವರಿಗೆ ವಿತರಿಸುತ್ತಿದ್ದರು. ಈಗ ಈ ಪದ್ಧತಿ ನಿಂತೇ ಹೋಗಿದೆ. 

*****

ಭಗವಾನ್ ವೇದವ್ಯಾಸರ ಕುರಿತಾದ ನಾಣ್ನುಡಿ ವಿಷಯದಲ್ಲಿ ಉಚ್ಚಿಷ್ಟ ಅನ್ನುವ ಪದಕ್ಕೆ ಎಂಜಲು ಎಂದು ಅರ್ಥ ಮಾಡುವುದು ಅಷ್ಟು ಸಮಂಜಸವಲ್ಲ. ಅವರ ಅನೇಕ ಸೃಷ್ಟಿಗಳಲ್ಲಿ ಒಂದಾದ ಮಹಾಭಾರತದ ವಿಷಯದಲ್ಲಿಯೇ "ಇಲ್ಲಿರುವುದೇ ಬೇರೆಲ್ಲ ಕಡೆ ಇರುವುದು. ಇಲ್ಲಿರದುದು ಬೇರೆಲ್ಲಿಯೂ ಇಲ್ಲ" ಎಂದು ಹೇಳುತ್ತಾರೆ. ಈ ಕೃತಿಯ ಒಂದು ಎಳೆ ಹಿಡಿದು ಕೃತಿ ರಚಿಸಿ ಅನೇಕರು ಮಹಾಕವಿಗಳಾದರು; ಪೂಜ್ಯರೆನಿಸಿದರು. ಕೆಲವು ಕೃತಿಗಳನ್ನು ಒಮ್ಮೆ ಓದಿದರೆ ಮುಗಿಯಿತು. ಆದರೆ ವೇದವ್ಯಾಸರ ಕೃತಿಗಳು ಮತ್ತೆ ಮತ್ತೆ ಓದಿದರೆ ಹೊಸ ಹೊಸ ಅರ್ಥಗಳು ಇಂದಿಗೂ ಹೊಳೆಯುತ್ತವೆ. 

ಈ ದೃಷ್ಟಿಯಿಂದ "ವ್ಯಾಸೋಚ್ಛಿಷ್ಟಮ್ ಜಗತ್ಸರ್ವಂ" ಎನ್ನುವುದಕ್ಕೆ "ವ್ಯಾಸರು ನಮಗೆ ಕೊಟ್ಟಿರುವ ಪ್ರಸಾದ" ಎನ್ನುವುದೇ ಸರಿ ಎನ್ನಬಹುದು. 

ಈ ಸಂಚಿಕೆ ಈಗಾಗಲೇ ದೀರ್ಘವಾಗಿರುವುದರಿಂದ, ಎಂಜಲು ಎನ್ನುವ ವಿಷಯದಲ್ಲಿ ಶ್ರೀಕನಕದಾಸರು ಹೇಳಿರುವ ವಿಶೇಷ ವಿಷಯವನ್ನು ಮುಂದೊಮ್ಮೆ ನೋಡೋಣ. 

Saturday, March 9, 2019

The Many Shades of Love


Online dictionary defines love as "a profoundly tender, passionate affection for another person" or "a feeling of warm personal attachment or deep affection, as for a parent, child or a friend". The word Love is so commonly and frequently used and yet has different meanings at different times and in varying situations. Whatever the context in which the word is used, most of the people understand the meaning of the word in the context it is used. A little study of the word indicates that the word has many meanings in different contexts. The love of a man for a woman or vice versa is different from the love of a mother to a child. The love of a husband for the wife or vice versa is different from the love of a teacher to his pupil or a devotee to the Lord. 

Love is often an intense feeling for someone or something. It can be earthly and confined to the physical attraction. It can be for something for physical objects like a musical instrument or books. It can as well be for something abstract like the love for the Lord. Sometimes its effects can be seen and at other times it can only be felt. Some shades of love can be understood by all. Some other shades require a deeper understanding of the background and some preparation to fathom the depth of the intense feelings of love. 

It is interesting to note that different philosophies deal with the word in detail and mention different types of love. In a sense, love is like colour; it has different shades and takes many forms. While a detailed study of the word can fill a vast canvas and can be a subject for a PhD thesis, there is no harm in considering a limited edition of the study to understand the basic philosophy that denotes the word.
*****

References to Bible give four kinds of love. They are identified through 4 Greek words, Eros, Storge, Phileo and Agape. They represent the four different faces of love:

Eros originated from the Greek God of love and represents physical or romantic love.  It is more commonly associated with bodily attraction as mentioned with the acts of Cupid (Roman God of Love). Storge refers to the love between mother and child or parents and children, love among family members like brothers and sisters etc. Phileo is wider and denotes love among the people in the same community and emotional bonding between deep friendships. It can also be in the context of philosophy and learning. Agape is considered as the highest form of love, the one between the Lord and mankind or the love of a devotee to the Lord.
*****

Arabic myth refers to seven shades of love. Each is indicated by an Arabic word and these words are commonly used in Urdu as well. The seven shades and their main qualities are Hub (Attraction), Uns (Infatuation), Ishq (Love), Adiqat (Reverence), Ibadat (Worship), Junoon (Obsession) and Maut (Death). As the meanings of the words indicate, these shades show different levels from physical attraction to highest form of worship. Some sources also mention ten and eleven shades of love.
*****

What is the interpretation of shades of love in the Indian context? Ancient Indian texts give three basic shades of love. These shades depend upon the comparative relationship between the two personalities involved. An example can be the relationship of a Guru (Mentor) and a Shishya (Disciple or Mentee). There is flow of love from both sides; but their expression and shades differ. Another example is the love between two equals, where the flow on either side is similar. 

Love is not a static concept; it evolves with time. An example of this evolvement over years is the love between a son or daughter and the parents. On the day of birth, the love between the parents and the baby is something that can be really understood by those who have felt it. As the child grows up, the love of the parents takes the shape of love between a guide and the ward. It moves towards one between friends in due course. The trend reverses as the child grows into an adult and the parents grow older. Protectiveness which was one of the expressions of love now gets reversed and the parents receive the protection of their own child, now grown into an adult. The cycle moves on....

The three basic shades of love defined in the ancient Indian texts are:
  • Love towards those who are at a higher pedestal takes the shape of reverence. This is identified as Bhakti. (भक्ति - ಭಕ್ತಿ )
  • Love towards those who are our equals and the flow is the same in both directions. This is Sneha. ( स्नेह - ಸ್ನೇಹ )
  • Love towards those who are younger or dependant on us. This is Krupa - Grace or Favour. (कृपा - ಕೃಪೆ )
The three shades mentioned above are not to be confused to be one of status or superior or inferior stances. It is basically a method of social interaction in a mutually accepted relationship. With advancement in age, knowledge and maturity, movement from one level to the next higher level is a natural progression; it is not something to be shy of or proud as well.

Those in the first level are to behave with benevolence and kindness. Those in the third level are to behave with reverence and deference. In the life's journey all of us will be at one of these levels at sometime or the other!

Does this have any similarity with Transaction Analysis? 

Thursday, May 3, 2012

Uddalaka and Pen-drive

Sage Dhaumya was a very learned scholar and one of the best teachers of his times.  He was running a Gurukula (School or University) in a forest.   His Gurukula was a place where the students were treated like his own children.  Once admitted to the Gurukula, entire responsibility for their well being was with the Guru.  The students were required to do all the work of the Gurukula like cleaning the place, grazing cattle, bringing firewood and other similar chores.  Each one was taught different subjects according to their own taste and potential to learn.  Guru decided what should be taught to a student and how much, depending upon his capacity to receive and retain knowledge.

One young boy wanted to join the Gurukula and study with other students.  He approached the Guru and put forth his request.  Guru declined to take him in for reason that the Gurukula was already full.  The boy went away without a murmur only to reappear after some days.  The request was the same and the answer was also the same.  This repeated for several rounds but the boy did not give up.  Guru tested him long enough to see if the boy was really keen on learning.  The boy passed the test.  Finally Guru gave in and admitted him as a student.

This boy was of average intelligence and not among the brightest of students.  But his devotion to the Guru was unparalleled.  He carried out all of Guru's orders with utmost dedication and accomplished all the tasks assigned to him dutifully. He appeared to have only one goal in life; to carry out every single order of the Guru to his satisfaction.  Though he did not make much progress in his studies, he continued in the Gurukula unmindful of other things.

It started raining heavily one morning and it looked like the entire surroundings would be flooded.  The Guru was worried about the standing crop in a small field nearby.  Any breach in the tank located just above the fields would wash away the crop.  The crop was the main source to feed the students during the next year. He wanted somebody to go over there and inspect the tank and do anything required to prevent the tank from breaching and washing away the crops.  As usual it was this boy who was available immediately and the Guru commissioned him on the job.  The boy dutifully left on the assignment. The pouring rain and physical difficulty did not bother him and his mind was occupied by only one thing; save the tank and protect the crops.

Once his daily routine started Guru forgot about the boy and remembered him only late in the evening.  Worried about the boy not returning till then he went in search of the boy, taking other students with him.  The boy was nowhere to be seen.  When the Guru called the boy's name loudly there was a feeble voice heard from the tank bed.  The boy was lying along the tank bed to prevent it from breaching.  Unable to control the flow of water singly, he deemed it fit to cover the breach with his body.  His body had become cold due to continuous rains and lying in the tank water.  With the help of other students, Guru filled the breach and dragged the boy out of the mess.  Moved by the devotion and dedication of the boy he embraced him and brought him to Gurukula.

When the boy appeared before him on the next morning,  Guru asked the boy to come and sit before him.  He placed his right hand on the boy's head and by invoking all his spiritual powers transferred  all of his own knowledge to the boy.  And now the boy of average intelligence suddenly became as knowledgeable as the Guru himself!

This is the story of Aruni, who was later known as Uddalaka.  Uddalaka, meaning the one who came out of water.  His name is mentioned with utmost respect in Chandogya and Kathopanisahads.

After all,  Pen-drives are not an invention of 20th century.  Sage Dhaumya was already having it with him.  He and Aruni both had USB ports as well and that is why transfer of knowledge, all of it that was there, was possible instantaneously and effortlessly!